ಪೊಲೀಸ್ ಅಧಿಕಾರಿಗಳಿಗೆ ಫ್ರಿ ಹ್ಯಾಂಡ್: ತನಿಖೆಯಲ್ಲಿ ಮಧ್ಯಪ್ರವೇಶ ಮಾಡಲ್ಲ- ಡಿ.ಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,5,2024(www.justkannada.in): ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಎಫ್ ಎಸ್ ಎಲ್ ವರದಿಯಲ್ಲಿ ದೃಢವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಪೊಲೀಸ್ ಅಧಿಕಾರಿಗಳಿಗೆ ಫ್ರಿ ಹ್ಯಾಂಡ್ ಕೊಟ್ಟಿದ್ದೇವೆ.  ತನಿಖೆಯಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಅಧಿಕಾರಿಗಳು ಸರಿಯಾದ ಕೆಲಸ ಮಾಡುತ್ತಾರೆ.  ದೇಶದ್ರೋಹ ಕೇಸ್ ಇದು . ತನಿಖೆ ಇನ್ನೂ ನಡೆಯುತ್ತಿದೆ.  ಧ್ವನಿಗಳು ಇನ್ನೂ ಭಿನ್ನವಾಗಿ ಕೇಳಿಸುತ್ತಿವೆ ಎಂದು ತಿಳಿಸಿದರು.

Key words: Free hand – police- officers- interfere – investigation- DK Shivakumar