ಚುನಾವಣಾ ಪ್ರಚಾರಕ್ಕೆ ಸಜ್ಜಾಗುತ್ತಿದ್ದ ನಟಿ ಶೃತಿಗೆ ಅನಾರೋಗ್ಯ

kannada t-shirts

ಬೆಂಗಳೂರು, ಮೇ 17, 2019 (www.justkannada.in): ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಶ್ರುತಿ ಅನಾರೋಗ್ಯಕ್ಕೀಡಾಗಿದ್ದಾರೆ.

ಅವರಿಗೆ ಚರ್ಮ ಅಲರ್ಜಿ ಸಮಸ್ಯೆ ಉಂಟಾಗಿದ್ದು, ಗುರುವಾರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕುಂದಗೋಳ ಉಪ ಚುನಾವಣೆಯ ಪ್ರಚಾರಕ್ಕೆ ಹುಬ್ಬಳ್ಳಿಗೆ ಹೋಗಲು ಬೆಳಗ್ಗೆ 5 ಗಂಟೆಗೆ ಎದ್ದಿದ್ದ ಅವರಿಗೆ ತುಟಿ ಕೊಂಚ ಊದಿಕೊಂಡ ಅನುಭವ ಆಗಿದೆ. ಬಳಿಕ ನಾಲಗೆ ದಪ್ಪ ಆಗಲು ಶುರುವಾಗಿದ್ದು, ಮಾತನಾಡಲೂ ಆಗದಂತೆ ನಾಲಗೆ ಮರಗಟ್ಟಿದೆ.

ಬಳಿಕ ಸ್ವಲ್ಪ ಹೊತ್ತಿಗೆ ಉಸಿರಾಡುವುದು ಕಷ್ಟವಾದಾಗ ತಕ್ಷಣ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

website developers in mysore