ಬಿಟ್ ಕಾಯಿನ್ ಪ್ರಕರಣ: ಬೆಂಗಳೂರಿನಲ್ಲಿ ಆರೋಪಿ ​ಶ್ರೀಕಿ ಬಂಧನ

ಬೆಂಗಳೂರು,ನವೆಂಬರ್,6,2021(www.justkannada.in):  ರಾಜ್ಯದಲ್ಲಿ  ಸಾಕಷ್ಟು ಸುದ್ಧಿಯಾಘಿರುವ ಬಿಟ್​ ಕಾಯಿನ್​ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು  ಬಂಧಿಸಿದ್ದಾರೆ.

ಬೆಂಗಳೂರಿನ 5 ಸ್ಟಾರ್​ ಹೋಟೆಲ್​ನಲ್ಲಿ ಶ್ರೀಕೃಷ್ಣನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಶ್ರೀಕಿ ತಂಗಿದ್ದ ಹೋಟೆಲ್​ನಲ್ಲಿ ವಿಷ್ಣು ಭಟ್ ಎಂಬಾತ ಆರೋಪಿ ಶ್ರೀಕಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೀವನ್​ ಭೀಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಶ್ರೀಕಿ, ಗಲಾಟೆ ಮಾಡಿದ್ದ ವಿಷ್ಣು ಭಟ್ ವಶಕ್ಕೆ ಪಡೆಯಲಾಗಿದೆ.

ಬಿಟ್​ ಕಾಯಿನ್​ ವಿಚಾರದಲ್ಲಿ ಬೇಕಾಗಿದ್ದ ಆರೋಪಿ ಶ್ರೀಕಿ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದನು. ಶ್ರೀಕಿ ಎಲ್ಲಿದ್ದಾನೆ ಎಂದು ಯಾರಿಗೂ ಗೊತ್ತಿರಲಿಲ್ಲ. ಇದೀಗ  5 ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಆರೋಪಿ ಶ್ರೀಕಿ ವಶಕ್ಕೆ ಪಡೆಯಲಾಗಿದೆ.

Key words: Bit Coin –case- Arrest -accused -Krishna -Bangalore