‘ಮಿಸ್​ ಯೂ ಚಿರು’. ನಿನ್ನನ್ನು ಬಿಟ್ಟು ಇರಲು ಸಾಧ್ಯವಾಗುತ್ತಿಲ್ಲ: ಅಣ್ಣನನ್ನ ನೆನೆದು ಭಾವುಕರಾದ ನಟ ದ್ರುವ ಸರ್ಜಾ.

ಬೆಂಗಳೂರು.ಸೆಪ್ಟಂಬರ್,13,2021(www.justkannada.in): ನಟ ಚಿರಂಜೀವಿ ಸರ್ಜಾ ನಿಧನರಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಆಗಿದೆ. ನಟ ದೃವ ಸರ್ಜಾರಿಗೆ ಸಹೋದರನ ನೆನಪು ಕಾಡುತ್ತಿದೆ. ಅಣ್ಣನನ್ನ ನೆನೆದು ನಟ ದ್ರುವ ಸರ್ಜಾ ಭಾವುಕರಾಗಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಧ್ರುವ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಬಾಲ್ಯದಿಂದ ಹಿಡಿದು ಚಿರು ನಿಧನದವರೆಗೂ ಅಣ್ಣ-ತಮ್ಮ ಜೊತೆಯಾಗಿ ಕಳೆದ ಅನೇಕ ಪ್ರೀತಿಯ ಕ್ಷಣಗಳು ಈ ವಿಡಿಯೋದಲ್ಲಿ ಸೆರೆಯಾಗಿವೆ. ‘ಮಿಸ್​ ಯೂ ಚಿರು. ನಿನ್ನನ್ನು ಬಿಟ್ಟು ಇರಲು ಸಾಧ್ಯವಾಗುತ್ತಿಲ್ಲ’ ಎಂದು ಇದಕ್ಕೆ ಅವರು ಕ್ಯಾಪ್ಷನ್​ ನೀಡಿದ್ದಾರೆ. ಅವರಿಗೆ ಸಮಾಧಾನ ಮಾಡುವ ರೀತಿಯಲ್ಲಿ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.