ಶಿವರಾಮಕಾರಂತ ಬಡಾವಣೆ : ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ    

ಬೆಂಗಳೂರು,ಆಗಸ್ಟ್,18,2021(www.justkannada.in): ಶಿವರಾಮಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯವು ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ವತಿಯಿಂದ ಸೋಮಶೆಟ್ಟಿಹಳ್ಳಿ & ಮೇಡಿ ಅಗ್ರಹಾರದಲ್ಲಿ ಸ್ಥಾಪಿಸಿರುವ ಸಹಾಯ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.

ಸೆಪ್ಟೆಂಬರ್ 9 ರ (2021) ಬಳಿಕ ಸಹಾಯ ಕೇಂದ್ರ & Online ಮೂಲಕ ಅರ್ಜಿ ಸ್ವೀಕರ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಳ್ಳಲಿವೆ, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸಮಿತಿಯು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಭೂಮಾಲೀಕರು / ಸಾರ್ವಜನಿಕರು ಕೊನೆಯ ದಿನಾಂಕದೊಳಗೆ ಅಹವಾಲು / ಅರ್ಜಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

Key words: sivaramakarantha- badavane-application