ಸದನದಲ್ಲಿ ಚರ್ಚೆಗೆ ಸ್ಪೀಕರ್ ಅವಕಾಶ ನೀಡದ ಹಿನ್ನೆಲೆ: ಶಾಸಕ ಯತ್ನಾಳ್ ವಿರುದ್ದ ರಾಜ್ಯಪಾಲರಿಗೆ ದೂರು….

ಬೆಂಗಳೂರು,ಮಾ,4,2020(www.justkannada.in):  ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಚರ್ಚಿಸಲು ಸದನದಲ್ಲಿ ಸ್ಪೀಕರ್ ಅವಕಾಶ ನೀಡದ ಹಿನ್ನೆಲೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾರನ್ನ ಭೇಟಿಯಾಗಿ ಇಂದು ಮನವಿ ಸಲ್ಲಿಸಿತು. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ದೂರು ನೀಡಿದ ‘ಕೈ’ ನಿಯೋಗ, ಸದನದಲ್ಲಿ ಪ್ರತಿ ವಿಷಯಗಳ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಗೆ ನಿರ್ದೇಶಿಸಿ ಎಂದು ಮನವಿ ಮಾಡಿತು.

ದೊರೆಸ್ವಾಮಿ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ಖಂಡಿಸಿ ಕಳೆದ ಎರಡು ದಿನಗಳಿಂದ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. ಈ ವಿಚಾರ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಬಳಿ ಆಗ್ರಹಿಸಿದರು. ಆದರೆ ಚರ್ಚೆಗೆ ಸ್ಪೀಕರ್  ಅವಕಾಶ ನೀಡಲಿಲ್ಲ. ಹೀಗಾಗಿ ಈ ಬಗ್ಗೆ ದೂರು ನೀಡಲಾಗಿದೆ.

Key words: session-Speaker -debate -Complaint – Governor -congress -Delegation