ಸಿಎಂ ಬದಲಾವಣೆ ನೂರಕ್ಕೆ ನೂರು ಸತ್ಯ- ಹೊಸಬಾಂಬ್ ಸಿಡಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ.

ಕೊಪ್ಪಳ,ನವೆಂಬರ್,11,2021(www.justkannada.in): ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ  ಅಧಿಕಾರ ಹೋಗುತ್ತೆ. ಸಿಎಂ ಬದಲಾವಣೆ ನೂರಕ್ಕೆ ನೂರು ಸತ್ಯ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ ತಂಗಡಗಿ, ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂಬುದರ ಬಗ್ಗೆ ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ. ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಇಬ್ಬರು ಸಿಎಂ ಆಗುತ್ತಾರೆ. ಹಾಲಿ ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರು ಸತ್ಯ. ಬೊಮ್ಮಾಯಿರನ್ನ ಬಿಟ್ಟು ಇನ್ನೂ ಒಬ್ಬರು ಸಿಎಂ ಆಗುತ್ತಾರೆ. ಅವರಿಗೆ ಸಿಂಗಲ್ ಆಗಿ ಆಡಳಿತ ಮಾಡೋದಕ್ಕೆ ಬರಲ್ಲ. ಬಿಜೆಪಿ ಹಿಂದೆ ಮೂವರನ್ನು ಮುಖ್ಯಮಂತ್ರಿ ಮಾಡಿತ್ತು. ಈ ಬಾರಿ ನಾಲ್ವರು ಮುಖ್ಯಮಂತ್ರಿ ಆಗಬಹುದು. ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಾತಾಡ್ತಾರೆ. ದೂರು ದಾಖಲಿನ ಪ್ರತಿ ಕೊಡಿ ಎಂದು ನಾಯಕರು ಕೇಳ್ತಿದ್ದಾರೆ. ಅದರ ಬಗ್ಗೆ ಹೆದರಿಕೆ ಇರೋದಕ್ಕೆ ಬಿಜೆಪಿಯವರು ಕೊಡುತ್ತಿಲ್ಲ. ಆರೋಪಿಸುವವರೇ ಸಾಕ್ಷ್ಯ ಕೊಡಬೇಕು ಅಂದ್ರೆ ಸರ್ಕಾರವೇಕೆ? ಎಂದು ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.

Key words: CM –change-state- 100%-true-  Former minister- Shivraj Thangadagi