ಹೆಚ್​.ಡಿ. ಕುಮಾರಸ್ವಾಮಿಗೆ ಆರ್​ ಎಸ್ ​ಎಸ್​ ಗಂಧಗಾಳಿ ಗೊತ್ತಿಲ್ಲ- ಸಚಿವ ಆರ್.ಅಶೋಕ್ ವಾಗ್ದಾಳಿ.

ದಾವಣಗೆರೆ,ಅಕ್ಟೋಬರ್,16,2021(www.justkannada.in):  ವಿಶ್ವವಿದ್ಯಾನಿಲಯಗಳಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರನ್ನ ಸಿಂಡಿಕೇಟ್ ಸದಸ್ಯರಾಗಿದ್ದಾರೆ. ಕೆಲಸ ಆಗಲು ಒಂದು ಎರಡು ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದಾರೆ. 40 ವರ್ಷದ ಹಿಂದಿನ ಆರ್​ ಎಸ್​ ಎಸ್​ ಬೇರೆ, ಈಗಿನ ಆರ್ ​ಎಸ್​ ಎಸ್​ ಬೇರೆ ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

 ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿಗೆ ಆರ್​ಎಸ್​ಎಸ್​ ಗಂಧಗಾಳಿ ಗೊತ್ತಿಲ್ಲ. ಯಾವುದೋ ಒಂದು ಪುಸ್ತಕ ಓದಿ ಅದೇ ಸತ್ಯವೆಂದು ಹೇಳ್ತಾರೆ ಎಂದು ಬಿಜೆಪಿ ನಾಯಕ ಹಾಗೂ ಸಚಿವ ಆರ್. ಅಶೋಕ್  ಟಾಂಗ್ ನೀಡಿದ್ದಾರೆ

ದಾವಣಗೆರೆಯಲ್ಲಿ ಮಾತನಾಡಿದ ಕಂದಾಯ ಸಚಿವ ಅಶೋಕ್​, ಕಾಂಗ್ರೆಸ್, ಜೆಡಿಎಸ್​ ನಡುವೆ ಅಲ್ಪಸಂಖ್ಯಾತರ ಓಲೆಕೆಗೆ ಪೈಪೋಟಿ ಇದೆ. ಕೇಂದ್ರ ಕಾಂಗ್ರೆಸ್, ರಾಜ್ಯ ಕಾಂಗ್ರೆಸ್​ನಲ್ಲಿ ಕಿತ್ತಾಟ ಶುರುವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ. ಬಸವರಾಜ ಬೊಮ್ಮಾಯಿಯವರೇ ಒಂದೂವರೆ ವರ್ಷ ಸಿಎಂ ಆಗಿರ್ತಾರೆ. ಬಿಜೆಪಿ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದೆ ಎಂದು ​ ಹೇಳಿಕೆ ನೀಡಿದ್ದಾರೆ.

Key words: HD Kumaraswamy -does not -know – RSS-Minister -R. Ashok