ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ- ಸಿಎಂ ಬಿಎಸ್ ವೈ ಘೋಷಣೆ.

kannada t-shirts

ಬೆಂಗಳೂರು,ಜೂನ್,14,2021(www.justkannada.in): ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.jk

ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾದಿಂದ ಮೃತಪಟ್ಟವರ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ 1 ಲಕ್ಷ  ಪರಿಹಾರ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದರು.

ಕೊರೋನಾದಿಂದಾಗಿ  ಹಲವು ಬಡಕುಟುಂಬಗಳು ಬೀದಿಗೆ ಬಂದಿವೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಪ್ರಾಪ್ತರು ಕೊರೊನಾದಿಂದ ಬಲಿಯಾದರೆ ಪರಿಹಾರ ಇಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

Key words: 1 lakh- compensation – family –  CM BS Yeddyurappa- Declaration.

website developers in mysore