ಪಟಾಕಿ ಸಿಡಿಸುವ ವೇಳೆ  10 ಮಂದಿಗೆ ಗಾಯ: ಆಸ್ಪತ್ರೆಗೆ ದಾಖಲು…

ಬೆಂಗಳೂರು,ನವೆಂಬರ್,15,2020(www.justkannada.in):  ದೀಪಾವಳಿ ಹಬ್ಬ ಸಂಭ್ರಮದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ 10 ಮಂದಿಗೆ ಗಾಯಗಳಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.kannada-journalist-media-fourth-estate-under-loss

ಬೆಂಗಳೂರಿನ ವಿಜಯಾನಂದ ನಗರದ ನಿವಾಸಿಯಾಗಿರುವ ಬಾಲಕ ಮಾಸ್ಟರ್ ಎಸ್ (12) ಪಟಾಕಿ ಸಿಡಿಸುವ ವೇಳೆ ಈ ಘಟನೆ ನಡೆದಿದೆ. 10 ಮಂದಿಗೆ ಗಾಯಗಳಾಗಿದ್ದು ಈ ಪೈಕಿ 4 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ ಎನ್ನಲಾಗಿದೆ.10-people-injured-fireworks-burst-hospitalization-bangalore

ಮಿಂಟೋ ಅಸ್ಪತ್ರೆಯಲ್ಲಿ ಒಬ್ಬರು, ನಾರಾಯಣ ಆಸ್ಪತ್ರೆಯಲ್ಲಿ ನಾಲ್ಕು ಮಂದಿ, ನೇತ್ರಧಾಮದಲ್ಲಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಷ್ಟೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ.  ಪಟಾಕಿ ಸಿಡಿಸುವುದಕ್ಕೆ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಮಧ್ಯೆಯೂ ಪಟಾಕಿ ಸಿಡಿಸುವ ವೇಳೆ 10 ಮಂದಿ ಗಾಯಗೊಂಡಿದ್ದಾರೆ.

Key words: 10 people -injured –fireworks- burst-Hospitalization-bangalore