ರಾಜ್ಯದಲ್ಲಿ 3 ವರ್ಷ ಅಲ್ಲ, 20 ವರ್ಷ ಬಿಜೆಪಿ ಸರ್ಕಾರ ಇರುತ್ತೆ-ಸಚಿವ ಶ್ರೀರಾಮುಲು ವಿಶ್ವಾಸ: ಡಿಕೆಶಿಗೆ ಜಾಮೀನು ಕುರಿತು ಏನಂದ್ರು….?

ಚಿತ್ರದುರ್ಗ,ಅ,24,2019(www.justkannada.in): ದೇಶದಲ್ಲಿ ಪ್ರಧಾನಿ ಮೋದಿ ಅಲೆ ಇದೆ. ಹೀಗಾಗಿ ರಾಜ್ಯದಲ್ಲಿ 3 ವರ್ಷ ಅಲ್ಲ, ಇನ್ನೂ 20 ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಮಾತನಾಡಿದ  ಆರೋಗ್ಯ ಸಚಿವ ಬಿ.ಶ್ರೀರಾಮುಲು, ಬಿಜೆಪಿಗೆ ಮಹಾರಾಷ್ಟ್ರ ಸಿಎಂ, ಹರಿಯಾಣ ಸಿಎಂ ಜನಪ್ರಿಯತೆ ಗಳಿಸಿದ್ದಾರೆ. ಮೋದಿ ದೇಶದ ಜನರ ಜೊತೆ ಜನಪ್ರಿಯತೆ ಗಳಿಸಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ನೆಲಸಮ ಆಗುತ್ತಿದೆ. ಮೋದಿ ಜೊತೆ ದೇಶದಲ್ಲಿ ಕಮಲ ಅರಳುತ್ತೆ. ದೇಶದಲ್ಲಿ ಮೋದಿ ಅಲೆ ಇದೆ. ರಾಜ್ಯದಲ್ಲಿ 3 ವರ್ಷ ಅಲ್ಲ, ಇನ್ನೂ 20 ವರ್ಷದ  ಬಿಜೆಪಿ ಸರ್ಕಾರ ಇರುತ್ತೆ ಎಂದರು.

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಜಾಮೀನು ಮಂಜೂರು ಕುರಿತು ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಡಿಕೆಶಿ ಬಗ್ಗೆ ನಾನು ಮನಸ್ಸಿನಿಂದ ಮಾತನಾಡಿಲ್ಲ. ಜೈಲಿಗೆ ಹೋಗುವಂತೆ ಹೇಳಿದವನು ಅಲ್ಲ.ನ್ಯಾಯಾಲಯದಿಂದ ಜಾಮೀನು ಪಡೆದು ಬಂದಿದ್ದಾರೆ. ಕಾನೂನಿನ ಮೇಲೆ ಎಲ್ಲರಿಗೂ ಗೌರವ ಇದೆ. ಎಲ್ಲರೂ ಮಾನವರು ನಾವು. ಕೆಟ್ಟದನ್ನ ಬಯಸುವವರು ಹಿಂದೂಗಳಲ್ಲ. ಕೆಟ್ಟದನ್ನ ಶತ್ರುಗಳಿಗೂ ಬಯಸಲ್ಲ, ಡಿಕೆಶಿ ಜೈಲಿಗೆ ಹೋದಾಗ ನಾವು ಹೊರಗೆ ಬರಲಿ ಎಂದು ಪ್ರಾರ್ಥಿಸಿದ್ದೇವೆ. ಕೆಟ್ಟದನ್ನ ಯಾರು ಬಯಸಲ್ಲ. ದೇವರೇ ಕೈ ಹಿಡಿದು ಕಷ್ಟಗಳಿಂದ ಪರಿಹರಿಸಲಿ. ಕಾನೂನು, ದೇವರಿದ್ದಾನೆ  ಎಲ್ಲವನ್ನು ಕಾಪಾಡುತ್ತಾನೆ‌ ಎಂದು ನುಡಿದರು.

ಇದೇ ವೇಳೆ ಸಿದ್ಧರಾಮಯ್ಯ ವಿರುದ್ದ ಗುಡುಗಿದ ಶ್ರೀರಾಮುಲು, ಸಿದ್ದರಾಮಯ್ಯ ಎಲ್ಲಿಯೂ ಸಮಾಧಾನ ಇರಲ್ಲ. ಅವರು ಪ್ರಚೋದನಕಾರಿ ಮಾತುಗಳು ಆಡಿದ್ದರು. ಮೈತ್ರಿ ಸರ್ಕಾರ ಬಿಳಿಸಲು ಸಿದ್ದರಾಮಯ್ಯ ಕಾರಣರಾಗಿದ್ದರು. ಕೆಳಗೆ ಬಿದ್ದರು ಮೀಸೆ ಮಣ್ಣಾಗಿಲ್ಲ ಅನ್ನುವಾಗೆ ಸಿದ್ದರಾಮಯ್ಯ ಅವರು ಎಂದು ಲೇವಡಿ ಮಾಡಿದರು.

Key words: 20-year -BJP government – state – Minister- Sriramulu-chitradurga