2ಎ ಮೀಸಲಾತಿ ಹೋರಾಟ ವಿಚಾರ: ಈಗಾಗಲೇ ವರದಿ ನೀಡಲು ಆಯೋಗಕ್ಕೆ ಸೂಚಿಸಲಾಗಿದೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮೀಸಲಾತಿ ವಿಚಾರ ಕುರಿತು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ಕೊಡಲು ಸೂಚಿಸಲಾಗಿದೆ. ಸಂವಿಧಾನದ ಪ್ರಕಾರ ಹಿಂದುಳಿದ ವರ್ಗಗಳ ಮೂಲಕವೇ ಶಿಫಾರಸು ಬರಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.jk

ಈ ಕುರಿತು ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಂದು ಪಂಚಮಸಾಲಿ ಸಮಾವೇಶ ನಡೀತಿದೆ. ಸ್ವಾಮೀಜಿಗಳ ಜತೆ ಈಗಾಗಲೇ ಮಾತಾಡಿದ್ದೇವೆ. ಇಂದು ಸಮಾವೇಶದಲ್ಲೂ ಮನವರಿಕೆ ಮಾಡಿಕೊಡ್ತೇವೆ. ಸರ್ಕಾರ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮನವರಿಕೆ ಮಾಡ್ತೇವೆ. ಮಾತುಕತೆಗೆ ಬನ್ನಿ ಅಂತ ಸ್ವಾಮೀಜಿಗಳನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದರು. 2A Reservation- panchamasali-Commission –report-Home Minister- Basavaraja Bommai

ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ಕೊಡಲು ಸೂಚಿಸಲಾಗಿದೆ. ಸಂವಿಧಾನದ ಪ್ರಕಾರ ಹಿಂದುಳಿದ ವರ್ಗಗಳ ಮೂಲಕವೇ ಶಿಫಾರಸು ಬರಬೇಕು ಎಂದರು.

Key words: 2A Reservation- panchamasali-Commission –report-Home Minister- Basavaraja Bommai