ನ್ಯಾ. ನಾಗಮೋಹನ್ ದಾಸ್ ವರದಿ ಜಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹ

ದಾವಣಗೆರೆ, ಸೆಪ್ಟಂಬರ್,6,2020(www.justkannada.in): ವಾಲ್ಮಿಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡಬೇಕು. ನ್ಯಾ. ನಾಗಮೋಹನ್ ದಾಸ್ ವರದಿ ಜಾರಿಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.jk-logo-justkannada-logo

ದಾವಣಗೆರೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮಿಕಿ ಗುರುಪೀಠದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮೀಸಲಾತಿಗೆ ಆಗ್ರಹಿಸಿ ರಾಜೀನಾಮೆ ನೀಡಿ ಎಂದರೇ ನಾನೂ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ನೀಡಿದರೇ ನ್ಯಾ. ನಾಗಮೋಹನ್ ವರದಿ ಜಾರಿ ಮಾಡಬೇಕು. ಈ ಸಂಬಂಧ ಚರ್ಚಿಸಲು ಕರೆದರೇ ನಾನೂ ಕೂಡ ಬರುತ್ತೇನೆ ಎಂದರು.7.5% reservation - Valmiki community-KPCC –work-President- Sathish jarakiholi,

ವಾಲ್ಮಿಕಿ ಸಮುದಾಯಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕು. ಈ ಬಗ್ಗೆ ಬಿಜೆಪಿ ಶಾಸಕರು ಸಚಿವರು ಸಿಎಂಗೆ ಹೇಳಲಿ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  7.5% reservation – Valmiki community-KPCC –work-President- Sathish jarakiholi,