ಇಂದು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಟಿಇಟಿ ಪರೀಕ್ಷೆ

ಮೈಸೂರು, ಆಗಸ್ಟ್ 22, 2021 (www.justkannada.in):  ಇಂದು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯುತ್ತಿದೆ.

ವೀಕೆಂಡ್ ಕರ್ಪ್ಯೂ  ಮೈಸೂರಿನಲ್ಲೂ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಓಡಾಟಕ್ಕೆ ವಿನಾಯಿತಿ ಇದೆ ಎಂದು ಶಿಕ್ಷಣ ಇಲಾಖೆ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ.

ಬೆಳಿಗ್ಗೆ 9.30ರಿಂದ 12ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 4ರವರೆಗೆ ಕ್ರಮವಾಗಿ ಪತ್ರಿಕೆ-1 ಹಾಗೂ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಮೊದಲ ಪತ್ರಿಕೆಗೆ 1,03,267 ಅಭ್ಯರ್ಥಿಗಳು, ಪತ್ರಿಕೆ-2ಕ್ಕೆ 1,51,095 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.