“ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲು ಮಾಡಲಿ” : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಜನವರಿ,14,2021(www.justkannada.in) : ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ. ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ. ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ. ಆ ಪಕ್ಷದವರೆ ಆರೋಪ ಮಾಡಿರೋದು, ನಾವೇನು ಆರೋಪ ಮಾಡ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.jk-logo-justkannada-mysore

ಅವರ ಪಕ್ಷದವರೆ ಆರೋಪ ಮಾಡ್ತಿದ್ದಾರೆ ಅಂದ್ರೆ ಅದರಲ್ಲಿ ಸತ್ಯ ಇದೆ ಅಲ್ವಾ? ನಾವ್ ಮಾಡಿದ್ರೆ ವಿರೋಧ ಪಕ್ಷದವರು ಅಂತಾರೆ. ಸಿಎಂ ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ. ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ,  ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳುತ್ತೇನೆ ಎಂದಿದ್ದಾರೆ.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಹಿಂದೆಯೂ ನಾನು ಹೇಳಿದ್ದೆ‌. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ರೂ. ಅವರ ಕುಟುಂಬದವರ ಅಕೌಂಟ್ ಗೆ ಹೋಗಿತ್ತು. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಜಾರಿಗೊಳಿಸಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾಯಕತ್ವ ಬದಲಾವಣೆಗೆ ಸಿದ್ದರಾಮಯ್ಯ ದಿನಾಂಕ ನಿಗದಿ ಮಾಡಲಿ ಎಂಬ ಬಿಎಸ್ವೈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಇಷ್ಟು ದಿನಗಳ ಕಾಲ ಮಂತ್ರಿ ಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ.  ಮಂತ್ರಿ ಮಂಡಲ ವಿಸ್ತರಣೆಗೆ ಯಾಕೆ ಲೇಟ್ ಆಯ್ತು. ಗೋಗರೆದು, ಕೈಕಾಲು ಕಟ್ಟಿ ಮಂತ್ರಿ ಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ಟೀಕಿಸಿದ್ದಾರೆ.

“ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ”

ಒಬ್ಬ ಮಿನಿಸ್ಟರ್ ನನ್ನು ಸಂಪುಟದಿಂದ ಬಿಟ್ಟಿದ್ದಾರೆ. ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಕಾರಣ ಕೊಟ್ಟಿಲ್ಲ. ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಪಕ್ಷೇತರ ಶಾಸಕ ನಾಗೇಶ್ ರನ್ನ ಕೈಬಿಟ್ಟಿದ್ದಾರೆ. ಅವರನ್ನ ಯಾವ ಕಾರಣಕ್ಕೆ ಡ್ರಾಪ್ ಮಾಡಿದ್ದಾರೆ ಎಂದು ಹೇಳಿಲ್ಲ. ಅವರು ಕೂಡ ಆಪರೇಷನ್ ಕಮಲಕ್ಕೆ ಒಳಪಟ್ಟವರು ಎಂದು ಕಿಡಿಕಾರಿದ್ದಾರೆ.About,CD Black,Mail,CM Criminal,Case,Register,Former,CM Siddaramaiah

ಈಗ ಮುನಿರತ್ನನನ್ನು ಕೈ ಬಿಟ್ಟಿದ್ದಾರೆ. ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ  ಕರೆದುಕೊಂಡರು. ಅವನನ್ನ ಮಿನಿಸ್ಟರ್ ಮಾಡಲು ಆಗಲಿಲ್ಲ ಎಂದಮೇಲೆ ಯಾಕೆ ತಗೆದುಕೊಂಡ್ರು ಅವನನ್ನ? ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು ಸಿದ್ದರಾಮಯ್ಯ ವ್ಯಂಗ್ಯಮಾಡಿದ್ದಾರೆ.

key words : About-CD Black-Mail-CM CriminalCase-Register-Former-CM Siddaramaiah