ಎಸಿಬಿ ದಾಳಿ: ಎಸಿಎಫ್ ಶ್ರೀನಿವಾಸ್ ನಿವಾಸದಲ್ಲಿ ಚಿನ್ನ, ಬೆಳ್ಳಿ, ನಗದು ಪತ್ತೆ….

ಚಿತ್ರದುರ್ಗ,ಫೆಬ್ರವರಿ,2,2021(www.justkannada.in):  ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಇಂದು ರಾಜ್ಯದ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.jk

ಈ ನಡುವೆ ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಎಸ್‌.ಶ್ರೀನಿವಾಸ್‌  ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಚಿನ್ನಾಭರಣ, ಬೆಳ್ಳಿ, ನಗದು ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ 870 ಗ್ರಾಂ ತೂಕದ ಚಿನ್ನಾಭರಣ, ಎರಡೂವರೆ ಕೆ.ಜಿ ಬೆಳ್ಳಿ ಹಾಗೂ ರೂ. 4.7 ಲಕ್ಷ ನಗದು ಸಿಕ್ಕಿದೆ.ACB- raid- Gold- silver -  ACF- Srinivas -residence

ಅಪಾರ ಪ್ರಮಾಣದ ಗೃಹೋಪಯೋಗಿ ವಸ್ತು, ಎರಡು ಕಾರು, ಟ್ರ್ಯಾಕ್ಟರ್‌ ಮತ್ತು ದಾಖಲೆ ಪತ್ರಗಳನ್ನ ಎಸಿಬಿ ಅಧಿಕಾರಿಗಳು ಪರಿಶೀಲನೆ  ನಡೆಸುತ್ತಿದ್ದಾರೆ.

Key words: ACB- raid- Gold- silver –  ACF- Srinivas -residence