“ಪರಿಷ್ಕೃತ ಕಡ್ಡಾಯ ಕನ್ನಡ ಬೋಧಿಸದಿದ್ದರೆ ಕ್ರಮ-ಎಚ್ಚರಿಕೆ ನೀಡಿದ ಟಿ. ಎಸ್ ನಾಗಾಭರಣ…

ಬೆಂಗಳೂರು,ಜು,15,2020(www.justkannada.in): ಭಾಷೆ ಬಗ್ಗೆ ಪ್ರೀತಿ, ಗೌರವವಿದೆ ಎಂದು ಹೇಳಿದರಷ್ಟೇ ಸಾಲದು,  ಅದು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದ್ದು, ಆಗಸ್ಟ್ ಅಂತ್ಯದೊಳಗೆ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿಕೊಂಡು, ಈ ಸಾಲಿನ ಶೈಕ್ಷಣಿಕ ವರ್ಷ ಆರಂಭವಾದಾಗ ಅದನ್ನು ವೃತ್ತಿ ಶಿಕ್ಷಣ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಇಲ್ಲದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಮುಂದಿನ ಹಾದಿಯನ್ನು ತುಳಿಯಬೇಕಾಗುತ್ತದೆ ಎಂದು ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಕರಿಸಿದ್ದಪ್ಪ ಹಾಗೂ ಕುಲಸಚಿವರಿಗೆ ಎಚ್ಚರಿಕೆ ನೀಡಿದ ಪ್ರಸಂಗ ಜರುಗಿತು.action-revised-compulsory-kannada-t-s-nagabarana

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆಯ ಜಾಲ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಟಿಎಸ್ ನಾಗಾಭರಣ,  ಕಳೆದ ಶೈಕ್ಷಣಿಕ ವರ್ಷದಲ್ಲಿಯೇ ಪರಿಷ್ಕೃತ ಕಡ್ಡಾಯ ಕನ್ನಡ ಪಠ್ಯಕ್ರಮವನ್ನು ಅಂಕಗಣನೆಯ ಆಧಾರದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಡೀಮ್ಡ್ ಇನ್ ವಿಶ್ವವಿದ್ಯಾಲಯ, ಸ್ವಾಯತ್ತ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ ಹಾಗೂ ಅದರ ಅಧೀನ ವಿದ್ಯಾಲಯಗಳಲ್ಲಿ ಬೋಧಿಸುವ ಸಂಬಂಧ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಇದುವರೆಗೂ ಆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಈ ಬಾರಿಯ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಕಡ್ಡಾಯ ಕನ್ನಡ ಪಠ್ಯಕ್ರಮವನ್ನು ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಜ್ಞಾನ ವಿಸ್ತರಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಿಚಾರಧಾರೆಗಳನ್ನು ತಿಳಿಸಿಕೊಡುವಂತೆ ಸೂಚಿಸಿದರು.

ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಬೋಧನೆ ಮಾಡುವುದರಿಂದ ಭಾಷಾ ಬೆಳವಣಿಗೆಯ ಜೊತೆಗೆ ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆಯು ಹೆಚ್ಚಲಿದ್ದು, ಭಾಷಾಭಿಮಾನ ಬೆಳೆಯಲಿದೆ. ಎಲ್ಲಾ ವೃತ್ತಿ ಶಿಕ್ಷಣ ವಿಶ್ವವಿದ್ಯಾಲಯಗಳಲ್ಲಿ  ಎರಡು ಸೆಮಿಸ್ಟರ್ ನಲ್ಲಿ ಕನ್ನಡ ಬೋಧನೆಯನ್ನು ಕಡ್ಡಾಯವಾಗಿ ಮಾಡಲೇಬೇಕು. ಈ ಬಗ್ಗೆ ಮಾರ್ಚ್ ನಲ್ಲಿ ತಮಗೆ ಪತ್ರ ಮುಖೇನ ತಿಳಿಸಿದ್ದರೂ ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂದು ಟಿ.ಎಸ್ ನಾಗಾಭರಣ ಬೇಸರ ವ್ಯಕ್ತಪಡಿಸಿದರು.

ಅಲ್ಲದೆ ವಿಶ್ವವಿದ್ಯಾಲಯದ ಜಾಲತಾಣದಲ್ಲಿಯೂ ಕೂಡ ಆಂಗ್ಲ ಭಾಷೆಯನ್ನು ಯಥೇಚ್ಛವಾಗಿ ಬಳಸಲಾಗಿದೆ. ಈ ಎಲ್ಲ ಕ್ರಮಗಳು ರಾಜ್ಯ ಸರ್ಕಾರದ ಕನ್ನಡ ಭಾಷಾ ನೀತಿಗೆ ವಿರುದ್ಧವಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾದರಿ ಜಾಲತಾಣವನ್ನು ರೂಪಿಸಿದ್ದು ಸರ್ಕಾರ ಅದಕ್ಕೆ ಮಾನ್ಯತೆ ನೀಡಿದಂತೆ ಈಗಾಗಲೇ 200ಕ್ಕೂ ಅಧಿಕ ಇಲಾಖೆಗಳು ಅದನ್ನು ಅಳವಡಿಸಿಕೊಂಡಿವೆ. ಅದರನ್ವಯ ವಿಶ್ವವಿದ್ಯಾಲಯವೂ ಕೂಡ ಕ್ರಮವಹಿಸಲಿ ಎಂದು ತಿಳಿಸಿದರು.

ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹೊಸ ಹೊಸ ಕನ್ನಡದ ಆಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು (ಪ್ರಾಜೆಕ್ಟ್) ನೀಡುವಂತೆ ಕುಲಪತಿಗಳಿಗೆ ಸಲಹೆ ನೀಡಿದರು. ಈ ಮೂಲಕ ಕನ್ನಡ ತಂತ್ರಜ್ಞಾನದ ಮಟ್ಟಕ್ಕೆ ಅಭಿವೃದ್ಧಿ ಹೊಂದುವಂತಾಗಲಿ ಎಂದು  ಟಿ.ಎಸ್ ನಾಗಾಭರಣ ಹಾರೈಸಿದರು.

ವಿಶ್ರಾಂತ ಕುಲಪತಿಗಳಾದ ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರು ಮಾತನಾಡಿ, ನಮ್ಮ ಸಾಹಿತ್ಯ-ಸಂಸ್ಕೃತಿಯನ್ನು ಸರಳ ರೀತಿಯಲ್ಲಿ ತಿಳಿಸಿಕೊಡುವ ಹಾಗೆ ಪಠ್ಯಕ್ರಮ ರಚನೆಯಾಗಬೇಕಿದೆ. ಪ್ರಸ್ತುತ ಬೋಧಿಸಲಾಗುತ್ತಿರುವ ಕನ್ನಡದ ಪಠ್ಯಪುಸ್ತಕ ವೈಜ್ಞಾನಿಕ ಕ್ರಮದಲ್ಲಿ ರಚನೆಯಾಗಿಲ್ಲ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿಯಿಂದ ಪರಿಷ್ಕೃತಗೊಳಿಸಲಾಗಿರುವ ಪಠ್ಯಕ್ರಮವನ್ನು ತಮ್ಮ  ವಿಶ್ವವಿದ್ಯಾಲಯವು ಒಳಗೊಂಡಂತೆ   ಡೀಮ್ಡ್ ಇನ್ ವಿಶ್ವವಿದ್ಯಾಲಯ, ಸ್ವಾಯತ್ತ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ ಹಾಗೂ ಅದರ ಅಧೀನ ವಿದ್ಯಾಲಯಗಳಲ್ಲಿ   ಬೋಧಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು. action-revised-compulsory-kannada-t-s-nagabarana

ಮುಖ್ಯಮಂತ್ರಿಗಳ ಆಡಳಿತ ಸಲಹೆಗಾರರಾದ ಶ್ರೀ ಬೇಳೂರು ಸುದರ್ಶನ…

ವಿಶ್ರಾಂತ ಕುಲಪತಿಗಳಾದ ಪ್ರೊ.ಹಿ.ಚಿ. ಬೋರಲಿಂಗಯ್ಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಕರಿಸಿದ್ದಪ್ಪ, ಕುಲಸಚಿವರಾದ ಶ್ರೀ ದೇಶಪಾಂಡೆ, ಮೌಲ್ಯಮಾಪನ ಕುಲಸಚಿವರಾದ ಸತೀಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ. ಮುರಳಿಧರ, ವೆಬ್ ಪೋರ್ಟಲ್  ಯೋಜನಾಧಿಕಾರಿ ಶ್ರೀ ಸತೀಶ್, ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Action – revised –compulsory- Kannada -T.S  nagabarana