ಬೆಂಗಳೂರಿನ ಅವ್ಯವಸ್ಥೆಗಳ ಕುರಿತು ಮೋದಿಗೆ ನಟ ಅನಿರುದ್ಧ್ ಪತ್ರ

ಬೆಂಗಳೂರು, ಮೇ 25, 2022 (www.justkannada.in): ನಟ ಅನಿರುದ್ಧ್  ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಪತ್ರ ಬರೆದಿದ್ದಾರೆ.

ಐಟಿ ಹಬ್, ಗ್ರೀನ್ ಸಿಟಿ  ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು ಎಂದು ಮೋದಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ  ರಾಜ್ಯಕ್ಕೆ ಈ ಬಗ್ಗೆ ಸೂಕ್ತ ಕಾರ್ಯ ನಿರ್ವಹಿಸಲು ಕೂಡಲೇ ಆದೇಶ ಮಾಡಬೇಕು ಎಂದು ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ಕೋರಿದ್ದಾರೆ.

ಐಟಿ ಹಬ್, ಗ್ರೀನ್ ಸಿಟಿ ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಗೂಡಾಗುತ್ತಿದೆ. ‘ಬ್ರ್ಯಾಂಡ್ ಬೆಂಗಳೂರು’ ಉಳಿಸುವ ಬಗ್ಗೆ ಪತ್ರದಲ್ಲಿ ನಮೂದಿಸಿದ್ದಾರೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು ಎಂದು ಪತ್ರದಲ್ಲಿ ನಮೂದಿಸಿದ್ದಾರೆ.