ಅನಾಥಾಶ್ರಮಕ್ಕೆ ದವಸ-ಧಾನ್ಯ ವಿತರಿಸಿ ಮಾದರಿಯಾದ ‘ಡಿ ಬಾಸ್’ ಅಭಿಮಾನಿಗಳು…

kannada t-shirts

ಬೆಂಗಳೂರು,ಫೆ,12,2020:  ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಈ ನಡುವೆ ಡಿ ಬಾಸ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ದವಸ-ಧಾನ್ಯ ವಿತರಿಸಿ ಮಾದರಿಯಾಗಿದ್ದಾರೆ.

ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು ದರ್ಶನ್ ಮಾತಿಗೆ ಬೆಲೆಕೊಟ್ಟು  ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ದವಸ-ಧಾನ್ಯ ವಿತರಿಸಿದ್ದಾರೆ.

ದರ್ಶನ್ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರೆ ದವಸ-ಧಾನ್ಯಗಳನ್ನು ದಾನ ನೀಡಿ, ಅದನ್ನು ಒಗ್ಗೂಡಿಸಿ ಸೇರಬೇಕಾದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು ಎಂದು ಅಭಿಮಾನಿಗಳಿಗೆ ಕರೆ ಕೊಟ್ಟಿದ್ದರು.

ಅಭಿಮಾನಿಗಳು ದವಸ-ಧಾನ್ಯಗಳನ್ನು ತಂದು ದರ್ಶನ್ ಅವರಿಗೆ ನೀಡುತ್ತಿದ್ದಾರೆ. ಅಕ್ಕಿ, ಬೇಳೆ ಸೇರಿದಂತೆ ಹಲವು ದವಸ-ಧಾನ್ಯಗಳು ತಂದುಕೊಟ್ಟು ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಭಿಮಾನಿಗಳು ನೀಡಿದ್ದ ದವಸ ಧಾನ್ಯಗಳ ಮೂಟೆಯ ರಾಶಿಯೇ ದರ್ಶನ್ ಮನೆಯಲ್ಲಿದ್ದು, ರಾಶಿ ರಾಶಿ ಮೂಟೆಯನ್ನು ಈಗ ವಿತರಿಸುವ ಕೆಲಸ ನಡೆಯುತ್ತಿದೆ.

website developers in mysore