ಮೈಸೂರು ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ಅಪ್ಪು

ಬೆಂಗಳೂರು, ಜುಲೈ 10, 2019 (www.justkannada.in): ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ಇಲ್ಲಿನ ಅಭಿಮಾನಿಗಳಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ್ದಾರೆ.

ಮೈಸೂರಿನ ಕಾಲೇಜು, ಮತ್ತಿತರ ಜಾಗದಲ್ಲಿ ಶೂಟಿಂಗ್ ಮಾಡುವಾಗ ಪ್ರತಿನಿತ್ಯ ಪವರ್ ಸ್ಟಾರ್ ನೋಡಲು ಕಾಣಿಕೆ ಹೊತ್ತು ಅಭಿಮಾನಿಗಳು ಜಮಾಯಿಸುತ್ತಿದ್ದರು. ಈ ಅಭಿಮಾನಿಗಳ ಜತೆ ಆದಷ್ಟು ಸೆಲ್ಫೀ, ಅಟೋಗ್ರಾಫ್ ನೀಡಿ ಖುಷಿ ಕೊಡಲು ಯತ್ನಿಸಿದ್ದೇನೆ. ಸಿಗದೇ ಇದ್ದವರು ಬೇಸರ ಮಾಡಿಕೊಳ್ಳಬೇಡಿ ಎಂದು ಅಪ್ಪು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ತಮ್ಮ ತಂದೆ ಡಾ.ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯೊಬ್ಬರ ಬಗ್ಗೆ ವಿಶೇಷವಾಗಿ ಪುನೀತ್ ಹೇಳಿಕೊಂಡಿದ್ದಾರೆ. ಕಸ್ತೂರಿ ನಿವಾಸ ಎಂದು ಹೆಸರಿಟ್ಟುಕೊಂಡು ಮನೆ ತುಂಬಾ ಅಪ್ಪಾಜಿ ಫೋಟೋ, ಛಾಯಾಚಿತ್ರಗಳನ್ನು ಹಾಕಿಕೊಳ್ಳುವ ಅಭಿಮಾನಿಯೊಬ್ಬರ ಅಭಿಮಾನವನ್ನು ಕೊಂಡಾಡಿದ್ದಾರೆ.