ಇಂದು ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್ ಸಿಎಂ ಭೇಟಿ ಮಾಡಿದ್ದೇಕೆ?!

ಬೆಂಗಳೂರು, ಮಾರ್ಚ್ 18, 2021 (www.justkannada.in): ಇಂದು ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.

ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಆದರೆ ಇದೊಂದು ಸೌಹಾರ್ದ ಮಾತುಕತೆಯಷ್ಟೇ ಎನ್ನಲಾಗಿದೆ.

ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.