ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಗುದ್ಧಲಿ ಪೂಜೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್..

kannada t-shirts

ಬೆಂಗಳೂರು,ಸೆಪ್ಟಂಬರ್,9,2020(www.justkannada.in): ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಾ. ವಿಷ್ಣು ಅವರ ಅಭಿಮಾನಿಗಳ ಕನಸು ನನಸಾಗುತ್ತಿದೆ. ಸೆಪ್ಟಂಬರ್ 15 ರಂದು ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಲಿದೆ.jk-logo-justkannada-logo

ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ದನ್ , ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸೆ.15 ರಂದು ನಡೆಯುವ ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆಯನ್ನು ನೆರವೇರಿಸುವಂತೆ ಸಿಎಂಗೆ  ಆಹ್ವಾನ ನೀಡಿದರು. ಇದೇ ವೇಳೆ ಭಾರತಿ ವಿಷ್ಣುವರ್ಧನ್ ಅವರಿಗೆ ನಟ ಅನಿರುದ್ಧ್ ಸಾಥ್ ನೀಡಿದರು.actor-vishnuvardhan-memorial-senior-actress-bharati-vishnuvardhan-invited-cm-bsy

ಹಲವು ವರ್ಷಗಳ ಬಳಿಕ ದಿವಂಗತ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಗುತ್ತಿದ್ದು ಡಾ.ವಿಷ್ಣುವರ್ದನ್ ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.

Key words: Actor –Vishnuvardhan- memorial – Senior actress- Bharati Vishnuvardhan- invited – CM BSY.

website developers in mysore