ನಟಿ ಶೃತಿ ಕಾರು ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ: ಸಾವಿನ ಸುತ್ತ ಅನುಮಾನ

ಬೆಂಗಳೂರು, ಡಿಸೆಂಬರ್ 19, 2019 (ww.justkannada.in): ಹಿರಿಯ ನಟಿ ಶೃತಿ ಕಾರು ಚಾಲಕನಾಗಿದ್ದ ಮಂಜುನಾಥ್​ ಸಿಂಗ್​ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾಚೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಾಗಡಿ ರಸ್ತೆಯ ಫಾರೆಸ್ಟ್​ ಗೇಟ್​ ಸಮೀಪದಲ್ಲಿದ್ದ ಮರವೊಂದಕ್ಕೆ ನೇಣು ಹಾಕಿಕೊಂಡಿರುವ ಮಂಜುನಾಥ್​ ಸಿಂಗ್ ನಟಿ ಶೃತಿ ಮತ್ತು ನಟ ಶರಣ್​ಗೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಮಂಜುನಾಥ್​ ಸಿಂಗ್​ ಅವರು ರಾತ್ರಿ ಸ್ನೇಹಿತರೊಂದಿಗೆ ಕಡಬಗೆರೆಯಲ್ಲಿ ಪಾರ್ಟಿ ಮಾಡಿದ್ದರು ಎಂದು ತಿಳಿದು ಬಂದಿದೆ. ಮಂಜುನಾಥ್​​ ಸಾವಿನ ಬಗ್ಗೆ ಹಲವು ಅನುಮಾನ ಹುಟ್ಟಿಕೊಂಡಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಮೃತನ ಕುಟುಂಬ ಆಗ್ರಹಿಸಿದೆ.