ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆಗೆ ನಿರ್ಧಾರ- ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ…

ಬೆಂಗಳೂರು,ಡಿ,12,2019(www.justkannada.in):  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ  ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಸದ್ಯ ಅಮಿತ್ ಶಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಇನ್ನು ನಾಲ್ಕು ದಿನಗಳ ಕಾಲ ದೆಹಲಿಗೆ ಹೋಗಲ್ಲ. ಅಮಿತ್ ಶಾ ಪ್ರಚಾರ ಮುಗಿಸಿ ವಾಪಸ್ ಬಂದ ಬಳಿಕ ದೆಹಲಿಗೆ ಹೋಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಅಮಿತ್ ಶಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಹಿನ್ನೆಲೆ ಈ ತಿಂಗಳಲ್ಲಿ ಸಂಪುಟ ವಿಸ್ತರಣೆ ಅನುಮಾನವಾಗಿದ್ದು ಮುಂದಿನ ತಿಂಗಳು ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

Key words: After -discussing -Amit Sha- decision –cabinat-expand -CM BS Yeddyurappa.