ಮತ್ತೆ ಮೊಳಗಿದ ಸಿದ್ಧರಾಮಯ್ಯ ಮುಂದಿನ ಸಿಎಂ ಕೂಗು.

kannada t-shirts

ಧಾರವಾಡ,ಡಿಸೆಂಬರ್,23,2022(www.justkannada.in): ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ  ಮಾಜಿ ಸಿಎಂ ಸಿದ‍್ಧರಾಮಯ್ಯ  ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ. ಈ ನಡುವೆ ಸಿದ್ಧರಾಮಯ್ಯ ಹೋದಲೆಲ್ಲಾ ಅವರ  ಅಭಿಮಾನಿಗಳು  ಸಿದ್ಧರಾಮಯ್ಯ ಮುಂದಿನ ಸಿಎಂ ಸಿದ್ಧರಾಮಯ್ಯ ಎಂಬ ಘೋಷಣೆ ಕೂಗಿವುದು ಸಾಮಾನ್ಯವಾಗಿಬಿಟ್ಟಿದೆ.

ಈ ಮಧ್ಯೆ ಮತ್ತೆ  ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಕೂಗು ಮೊಳಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಸಿದ‍್ಧರಾಮಯ್ಯ ಅಭಿಮಾನಿಗಳು ಈ ಘೋಷಣೆಯನ್ನ ಕೂಗಿದಿದ್ದಾರೆ.

ಸಂಶಿ ಗ್ರಾಮದಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು.  ಕಾರ್ಯಕ್ರಮಕ್ಕೂ ಮುನ್ನ ಸಿದ್ಧರಾಮಯ್ಯ ದೇವಸ್ಥಾನಕ್ಕೆ  ಭೇಟಿ ನೀಡಿ,  ಗ್ರಾಮದ ಕರಿಸಿದ್ದೇಶ್ವರ ದೇಗಲದಲ್ಲಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

Key words: Again- Siddaramaiah -called – next CM.

website developers in mysore