ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಹೆಚ್.ಡಿ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಫೆಬ್ರವರಿ,5,2021(www.justkannada.in):  ಸಮ್ಮಿಶ್ರ ಸರ್ಕಾರದ ವೇಳೆ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೆಲಸ ಮಾಡಲು ಕಾಂಗ್ರೆಸ್ ಬಿಡಲಿಲ್ಲ ಎಂದು ಹೇಳುವ ಮೂಲಕ ಹೆಚ್.ಡಿ ಕುಮಾರಸ್ವಾಮಿ ಪರ  ಸಿಎಂ ಬಿಎಸ್ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.jk

ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯದ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಬಹುಮತವಿಲ್ಲದಿದ್ದರೂ ಕಾಂಗ್ರೆಸ್-ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದವು. ಬಿಜೆಪಿಗೆ ಅಧಿಕಾರ ತಪ್ಪಿಸಲು ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದರು. ಆದರೆ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಕಾಂಗ್ರೆಸ್ ಕಿರುಕುಳ ನೀಡಿತ್ತು. ಹೆಚ್.ಡಿಕೆ ಕೆಲಸ ಮಾಡಲು ಕಾಂಗ್ರೆಸ್ ಬಿಡಲಿಲ್ಲ. ಕಾಂಗ್ರೆಸ್ ಪಕ್ಷ ವಿಪಕ್ಷಗಳಿಗೆ ಕೆಲಸ ಮಾಡಲು ಬಿಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

against-congress-cm-bs-yeddyurappa-batting-hd-kumaraswamy
ಕೃಪೆ-internet

 ನೆರಹಾವಳಿ ವೇಳೆ ಒಬ್ಬನೇ ಏಕಾಂಗಿಯಾಗಿ ರಾಜ್ಯಾದ್ಯಂತ ಓಡಾಡಿದ್ದೆ…

ಸಿದ್ಧರಾಮಯ್ಯ  ಸರ್ಕಾರದ ಅಭಿವೃದ್ಧಿ ಬಗ್ಗೆ ಟೀಕೆ ಮಾಡದೇ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಭೀಕರ ನೆರ ಹಾವಳಿ ಸ್ಥಿತಿ ನಿರ್ಮಾಣವಾಗಿತ್ತು. 2 ಲಕ್ಷ ಜನ ಬೀದಿಪಾಲಾಗಿದ್ದರು.  ಆ ವೇಳೆ ಮಂತ್ರಿಮಂಡಲ ರಚನೆಯಾಗಿರಲಿಲ್ಲ. ಆ ಸಮಯದಲ್ಲಿ ನಾನು ರಾಜ್ಯಾದ್ಯಂತ ಒಬ್ಬನೇ ಏಕಾಂಗಿಯಾಗಿ ಓಡಾಡಿ ಪರಿಹಾರ ಕಾರ್ಯ ಕೈಗೊಂಡಿದ್ದೆ. ಸಂತ್ರಸ್ತರಿಗೆ ತಲಾ ಹತ್ತು ಸಾವಿರ ನೆರವು ನೀಡಿದ್ದವು. 1465 ಪುನರ್ವಸತಿ ಕೇಂದ್ರಗಳನ್ನ ಸ್ಥಾಪಿಸಿದ್ದವು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

Key words: against –Congress-CM- BS Yeddyurappa –  batting- HD Kumaraswamy