ಏ.1ರಂದು ರಾಜ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ.

kannada t-shirts

ಬೆಂಗಳೂರು,ಮಾರ್ಚ್,18,2022(www.justkannada.in):   ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿದ್ದು ಈ ಮಧ್ಯೆ ಸಚಿವ ಸಂಪುಟ ವಿಸ್ತರಣೆಗಾಗಿ ಸಚಿವಾಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ವರಿಷ್ಠರ ಜತೆ ಚರ್ವೆ ನಡೆಸಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1 ರಂದು ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.  ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಮಿತ್ ಶಾ ಅವರ ಜತೆ ಚರ್ಚಿಸುವ ಸಾಧ್ಯತೆ ಇದೆ.Home Minister- Amit Shah- praises- Prime Minister Modi

ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಸಚಿವಾಕಾಂಕ್ಷಿಗಳು ಸಂಪುಟ ವಿಸ್ತರಣೆಗೆ ಆಗ್ರಹಿಸಿದ್ದರು. ಆದರೆ ಪಂಚರಾಜ್ಯ ಚುನಾವಣೆ ಎದುರಾದ ಹಿನ್ನೆಲೆ ಸಂಪುಟ ವಿಸ್ತರಣೆ ವಿಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೆ ಪಂಚರಾಜ್ಯ ಚುನಾವಣೆ ಬಳಿಕ ಈ ಬಗ್ಗೆ ಚರ್ಚಿಸೋಣ ಎಂದು ಅಮಿತ್ ಶಾ ಸಿಎಂ ಬೊಮ್ಮಾಯಿಗೆ ಹೇಳಿದ್ದರು ಎನ್ನಲಾಗಿದೆ. ಇದೀಗ ಏಪ್ರಿಲ್ 1 ರಂದು ಅಮಿತ್ ರಾಜ್ಯಕ್ಕೆ  ಆಗಮಿಸಲಿದ್ದು ಈ ವೇಳೆ ಸಂಪುಟ ವಿಸ್ತರಣೆ ಚರ್ಚೆಗೆ ಬರುತ್ತಾ ಕಾದು ನೋಡಬೇಕಿದೆ.

Key words: amith sha- cabinet- Extension

website developers in mysore