ರಾಮನಗರದಲ್ಲಿ ಕೊರೋನಾಗೆ ಮತ್ತೊಂದು ಬಲಿ…

kannada t-shirts

ಬೆಂಗಳೂರು,ಜೂ,23,2020(www.justkannada.in):  ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮಹಾಮಾರಿ ಕೊರೋನಾಗೆ ರಾಮನಗರದಲ್ಲಿ ಮತ್ತೊಂದು ಬಲಿಯಾಗಿದೆ.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಕಲ್ಲಳ್ಳಿಯ 50 ವರ್ಷದ ವ್ಯಕ್ತಿ ಕೊರೋನಾಗೆ ಬಲಿಯಾದವರು. ಈ ವ್ಯಕ್ತಿ ಉಸಿರಾಟದ ತೊಂದರೆಯಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ವ್ಯಕ್ತಿಗೆ ಕೋವಿಡ್ 19  ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ವ್ಯಕ್ತಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿತ್ತು.another-death-corona-ramanagaram

ಇದೀಗ ನಿನ್ನೆ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

Key words: Another –death-Corona – Ramanagaram

website developers in mysore