ನಟ ಚೇತನ್ ವಿರುದ್ಧ ಮತ್ತೊಂದು ಎಫ್ಐಆರ್: ವಿಚಾರಣೆಗಾಗಿ ಇಂದು ಬಸವನಗುಡಿ ಠಾಣೆಗೆ ಹಾಜರು

ಬೆಂಗಳೂರು, ಜೂನ್ 16, 2021 (www.justkannada.in): ನಟ ಚೇತನ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ಬ್ರಾಹ್ಮಣ ಸಮುದಾಯ ದೂರು ದಾಖಲಿಸಿದೆ.

ಚೇತನ್ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯದ ಗೌರವಕ್ಕೆ ಧಕ್ಕೆಯಾಗಿದೆ. ಅವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಿದ್ದಾರೆ ಎಂದು ದೂರಲಾಗಿದೆ.

ಇನ್ನು ಇದೇ ಈ ದೂರಿಗೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ನೋಟಿಸ್ ನೀಡಿದ್ದಾರೆ.

ಈ ವಿಚಾರವನ್ನು ಚೇತನ್ ಸ್ಪಷ್ಟಪಡಿಸಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯಿಂದ ನನಗೆ ನೋಟಿಸ್ ಬಂದಿದೆ. ಇಂದು ಬೆಳಗ್ಗೆ ಪೊಲೀಸ್ ಠಾಣೆಗೆ ಹೋಗಲಿದ್ದೇನೆ ಎಂದು ಟ್ವೀಟ್ಟರ್ ನಲ್ಲಿ ತಿಳಿಸಿದ್ದಾರೆ.