ಎಪಿಎಂಸಿ ಕಾಯ್ದೆ ರೈತರಿಗೆ ಮಾರಕ: ಸೆ.28ರ ಬಂದ್ ಗೆ ಸಹಕರಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ…

ಬೆಂಗಳೂರು,ಸೆಪ್ಟಂಬರ್,24,2020(www.justkannada.in)  ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ಧುಪಡಿ ವಿರೋಧಿಸಿ ಸೆಪ್ಟಂಬರ್ 28ಕ್ಕೆ ಬಂದ್ ಗೆ ಕರೆ ನೀಡಲಾಗಿದ್ದು, ಈ ಬಂದ್ ಸಹಕಾರ ನೀಡುವಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಮನವಿ ಮಾಡಿದ್ದಾರೆ.jk-logo-justkannada-logo

ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಎಪಿಎಂಸಿ ಕಾಯ್ದೆ ರೈತರಿಗೆ ಮಾರಕ.  ಸರ್ಕಾರದಿಂದ ರೈತರಮಾರುಕಟ್ಟೆಗೆ ಮಣ್ಣು ಹಾಕುವ ಕೆಲಸ ನಡೆಯುತ್ತಿದೆ. ಇದರಿಂದ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲವಾಗಲಿದೆ. ರೈತರಿಗೆ ದಾರಿ ತಪ್ಪಿಸುವ ಕೆಲಸ ಬೇಡ ಎಂದು ಹರಿಹಾಯ್ದರು.apmc-act-fatal-farmers-kodihalli-chandrasekhar-support-bandh

ಇನ್ನು ಸೆಪ್ಟಂಬರ್ 28 ರಂದು ನಡೆಯುವ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು ಈ ನಡುವೆ ರೈತರ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದರು.

Key words:  APMC Act – fatal – farmers- Kodihalli Chandrasekhar  support – bandh