ಎಪಿಎಂಸಿ ಕಾಯ್ದೆ ಉಪಯೋಗ ಕುರಿತು ಜ.5ರಿಂದ ರಾಜ್ಯಾದ್ಯಂತ ಪ್ರವಾಸ :  ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಡಿಸೆಂಬರ್,16,2020(www.justkannada.in) : ಕೇಂದ್ರ ಸರ್ಕಾರದ ಜನೌಷಧಿ ಸೇರಿದಂತೆ ಎಪಿಎಂಸಿ ಕಾಯ್ದೆಯಿಂದ ಜನತೆಗಾಗುವ ಉಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಿಕೊಡುವ ಕಾರ್ಯಕ್ರಮವನ್ನು ಜನವರಿ 5 ರಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.siddaramaiah-forgot-community-becoming-cm-mysore-naleen-kumar-kateel

ಹಿಂದುಳಿದ ವರ್ಗಗಳ ಬಿಜೆಪಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸಚಿವರು, ನಾಲ್ಕು ಕಂದಾಯ ವಿಭಾಗಗಳ 30 ಜಿಲ್ಲೆಗಳಲ್ಲೂ ಸಹ ಪ್ರವಾಸ ಮಾಡಿ ಕೇಂದ್ರದ ಯೋಜನೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆಯ ಉಪಯೋಗಗಳ ಅರಿವು ಮೂಡಿಸುತ್ತೇವೆ ಎಂದರು.

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯನ್ನು ಗ್ರಾಮೀಣ ಪ್ರದೇಶಗಳ ಜನರಿಗೂ ತಲುಪಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಇದನ್ನು ಸಹಕಾರ ಇಲಾಖೆಯ ಅಧೀನದಲ್ಲಿ ಬರುವ ಮಾರ್ಕೆಂಟಿಂಗ್ ಫೆಡರೇಶನ್ ಮೂಲಕ ಕೇಂದ್ರಗಳನ್ನು ತೆರೆದು ಜನರಿಗೆ ತಲುಪುವಂತೆ ನೋಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮಗೆ ಬಂದ ಪತ್ರದ ಬಗ್ಗೆ ಉಲ್ಲೇಖಿಸಿದ್ದು, “ವ್ಯಕ್ತಿಯೊಬ್ಬರು ತಮ್ಮ ತಂದೆಗೆ ಬಿಪಿ, ಶುಗರ್ ಗಾಗಿ ತಿಂಗಳಿಗೆ 2ರಿಂದ 3 ಸಾವಿರ ರೂಪಾಯಿ ವ್ಯಯಿಸಬೇಕಾಗಿತ್ತು. ಆದರೆ, ಜನೌಷಧಿ ಬಂದ ಮೇಲೆ ಕೇವಲ 250 ರೂಪಾಯಿಗೆ ಎಲ್ಲವೂ ಸಿಗುತ್ತಿದೆ” ಎಂದು ಪತ್ರದಲ್ಲಿ ಬರೆದಿದ್ದಾದ್ದಾಗಿ ಡಿವಿಎಸ್ ಅವರು ಮಾಹಿತಿ ನೀಡಿದ್ದರು ಎಂದು ಸಚಿವ ಸೋಮಶೇಖರ್ ಉಲ್ಲೇಖಿಸಿದರು.

ಆತ್ಮನಿರ್ಭರ ಅಡಿ ಹೆಚ್ಚುವರಿ 600 ಕೋಟಿಗೆ ಕೇಂದ್ರಕ್ಕೆ ಪ್ರಸ್ತಾವನೆ

ಇನ್ನು ಆತ್ಮನಿರ್ಭರ ಯೋಜನೆಯಡಿ ಕರ್ನಾಟಕಕ್ಕೆ 4750 ಕೋಟಿ ಅನುದಾನ ಸಿಗುತ್ತಿದೆ. ಇದರಲ್ಲಿ ಶೂನ್ಯ ಬಡ್ಡಿದರ ಹಾಗೂ ಶೇ. 3 ರ ಬಡ್ಡಿದರದಲ್ಲಿ 2ರಿಂದ 3 ಲಕ್ಷ  ರೂಪಾಯಿವರೆಗೆ ಮೀನುಗಾರಿಕೆ ಹಾಗೂ ಹೈನುಗಾರಿಕೆಗೆ ಸಾಲವನ್ನು ಕೊಡಲಾಗುತ್ತಿದೆ. ಜೊತೆಗೆ ಅರ್ಥಿಕವಾಗಿ ಬಲ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ. ರಾಜ್ಯದಲ್ಲಿ ಸಹಕಾರ ಇಲಾಖೆ ಮೂಲಕ ಜನರಿಗೆ ಆರ್ಥಿಕ ಬಲವನ್ನು ತುಂಬುವ ನಿಟ್ಟಿನಲ್ಲಿ ಆತ್ಮನಿರ್ಭರ ಭಾರತದ ಅಡಿ ಈಗಾಗಲೇ 600 ಕೋಟಿ ರೂಪಾಯಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗೆ ಈ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಸಚಿವರು ತಿಳಿಸಿದರು.

ರೈತರಿಗೆ ನನ್ನ ಬೆಳೆ, ನನ್ನ ಬೆಲೆ ಅಧಿಕಾರ

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಸಾಕಷ್ಟು ಅನುಕೂಲವಿದೆ. ಇದು ಬಂದಿದ್ದರಿಂದ ರೈತ ತನ್ನ ಉತ್ಪಾದನೆಯನ್ನು ರಾಜ್ಯದ ಯಾವುದೇ ಮೂಲೆಯಲ್ಲಿ ಬೇಕಿದ್ದರೂ ಮಾರಾಟ ಮಾಡಬಹುದು. ನನ್ನ ಬೆಳೆ, ನನ್ನ ಬೆಲೆ ಎಂದು ರೈತನೇ ನಿರ್ಧರಿಸುತ್ತಾನೆ. ಅಷ್ಟು ಸ್ವಾತ್ರಂತ್ರ್ಯವನ್ನು ರೈತರಿಗೆ ಸಿಗುವಂತೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಎಂದು ಸಚಿವರು ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ತೆಗೆಯಲ್ಲ, ಎಪಿಎಂಸಿ ಮುಚ್ಚಲ್ಲ

ಬೆಂಬಲ ಬೆಲೆಯನ್ನು ಕೊಟ್ಟೇ ಕೊಡುತ್ತೇವೆ. ರೈತರ ಸಂಕಷ್ಟ ಕಾಲದಲ್ಲಿ ನಮ್ಮ ಸರ್ಕಾರ ನೆರವಾಗುತ್ತದೆ. ಕನಿಷ್ಠ ಬೆಂಬಲ ಬೆಲೆಯನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅನೇಕ ಬಾರಿ ರೈತರ ನೆರವಿಗೆ ಬಂದಿದ್ದೇವೆ. ಇನ್ನು ಎಪಿಎಂಸಿಯನ್ನು ಮುಚ್ಚುವ ಪ್ರಸ್ತಾವೂ ನಮ್ಮ ಸರ್ಕಾರದ ಮುಂದೆ ಇಲ್ಲ. ರೈತರ ಪರವಾಗಿ ಎಪಿಎಂಸಿಗಳು ಕಾರ್ಯನಿರ್ವಹಿಸುತ್ತಿದೆ. ಇದು ವಿರೋಧ ಪಕ್ಷಗಳ ಸುಳ್ಳು ಪ್ರಚಾರ. ಅವರ ರಾಜಕೀಯ ದುರುದ್ದೇಶಕ್ಕೋಸ್ಕರ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಅರಸು ಅವರಿಗೆ ಅರಸು ಅವರೇ ಸಾಟಿ

ಹಿಂದುಳಿದ ವರ್ಗಗಳ ಬಿಜೆಪಿ ರಾಜ್ಯ ಮೋರ್ಚಾ ಅಧ್ಯಕ್ಷರಾಗಿರುವ ನೆ.ಲ.ನರೇಂದ್ರ ಬಾಬು ಅವರು ಉತ್ತಮ ಸಂಘಟನಾತ್ಮಕ ಕಾರ್ಯಗಳನ್ನು ಮಾಡಿತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಪರಿಶ್ರಮದಿಂದ ಬೆಳೆದು ಬಂದವರು. ಅನೇಕರನ್ನು ಬೆಳೆಸಿದ್ದಲ್ಲದೆ, ಹಿಂದುಳಿದವರ ಶ್ರೇಯೋಭಿವೃದ್ಧಿಗೆ ದುಡಿದವರು. ಇನ್ನು ರಾಜ್ಯದಲ್ಲಿ ದೇವರಾಜು ಅರಸು ಅವರು ಹಿಂದುಳಿದ ವರ್ಗಗಳ ನಾಯಕರಾಗಿ ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದರು. ಇಂದು ಅನೇಕ ನಾಯಕರನ್ನು ಅವರಿಗೆ ಹೋಲಿಕೆ ಮಾಡಲು ಹೋಗುತ್ತಾರೆ. ಆದರೆ, ಅರಸು ಅವರಿಗೆ ಅವರೇ ಸಾಟಿ  ಎಂದು ಸಚಿವ ಸೋಮಶೇಖರ್  ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆದಾಯ

 APMC,Use,Act,About,statewide,statewide,Tour,Minister,S.T. Somashekhar

ರಾಷ್ಟ್ರಿಯ ಹಿಂದುಳಿದ ವರ್ಗಗಳ ಬಿಜೆಪಿ ಘಟಕದ ಅಧ್ಯಕ್ಷರಾದ ಲಕ್ಷ್ಮಣ್ ಮಾತನಾಡಿ,  ಎಪಿಎಂಸಿ ಕಾಯ್ದೆ ತಿದ್ದುಪಡಿಯ ಉಪಯೋಗಗಳ ಬಗ್ಗೆ ಸಹಕಾರ ಸಚಿವರಾದ ಸೋಮಶೇಖರ್ ಅವರು ವಿಸ್ತಾರವಾಗಿ ಹಾಗೂ ಸರಳವಾಗಿ ತಿಳಿಸಿದ್ದಾರೆ. ಈ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಉತ್ತಮ ಆದಾಯ ಸಿಗುತ್ತಿದೆ. ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಿದ್ದರೂ ಮಾರಾಟ ಮಾಡಬಹುದು, ಮಾರುಕಟ್ಟೆಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಇನ್ನೂ ಅನೇಕ ಉಪಯೋಗಗಳು ಇದರಲ್ಲಿವೆ ಎಂದು ತಿಳಿಸಿದರು.

key words : APMC-Use-Act-About-statewide-statewide-Tour-Minister-S.T. Somashekhar