ಬಿಎಸ್ ವೈ ಆಪ್ತ ಎನ್.ಆರ್ ಸಂತೋಷ್ ಗೆ ಕೈ ತಪ್ಪಿದ ಟಿಕೆಟ್:  ಬಿಜೆಪಿ ಬಾವುಟಕ್ಕೆ ಬೆಂಕಿ ಹಚ್ಚಿ ಬೆಂಬಲಿಗರಿಂದ ಆಕ್ರೋಶ.

ಹಾಸನ,ಏಪ್ರಿಲ್,13,2023(www.justkannada.in):  ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಎನ್​​ಆರ್ ಸಂತೋಷ್ ​ಗೆ ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಈ ಹಿನ್ನೆಲೆಯಲ್ಲಿ ಸಂತೋಷ್ ಅವರ ಬೆಂಬಲಿಗರು ಬಿಜೆಪಿ ಬಾವುಟಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದ್ದರಿಂದ  ಅಸಮಾಧಾನಗೊಂಡ​ ಎನ್​​ಆರ್ ಸಂತೋಷ್​, ಬೆಂಬಲಿಗರ ಸಭೆಯಲ್ಲಿ ಕಣ್ಣೀರಿಟ್ಟಿದ್ದಾರೆ. ಇನ್ನೊಂದೆಡೆ ಎನ್​ಆರ್ ಸಂತೋಷ್​ ಅವರ ಮನೆ ಮುಂದೆ ಅವರ ಅಭಿಮಾನಿಗಳು  ಹೈಡ್ರಾಮಾವನ್ನೇ ಸೃಷ್ಠಿಸಿದ್ದು, ಬಿಜೆಪಿ ಬಾವುಟಕ್ಕೆ ಬೆಂಕಿ ಹಚ್ಚಿ, ಬಿಜೆಪಿ ಚುನಾವಣಾ ಪ್ರಚಾರಕ್ಮೆ ರೆಡಿಯಾಗಿದ್ದ ವಾಹನದ ಮೇಲಿನ ಬಿಜೆಪಿ ಕಮಲ ಚಿಹ್ನೆ ಹರಿದು ಹಾಕಿ ಆಕ್ರೋಶ ಹೊರ ಹಾಕಿದರು.

ಇನ್ನು ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಎನ್​ಆರ್​ ಸಂತೋಷ್, ಬೆಂಬಲಿಗರ ಅಭಿಪ್ರಾಯದಂತೆ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತೀರ್ಮಾನಿಸಿದ್ದು, ಸೋಮವಾರ ಐವತ್ತು ಸಾವಿರ ಜನರರೊಂದಿಗೆ ಹೋಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಣೆ  ಮಾಡಿದ್ದಾರೆ.

Key words: Arasikere-Ticket – NR Santosh- Supporters – outraged.