“ಇಬ್ಬರು ಕುಖ್ಯಾತ ಖದೀಮರ ಬಂಧನ: ನಗದು ಮತ್ತು ಬೈಕ್, ಮೊಬೈಲ್ ವಶಕ್ಕೆ

ಮೈಸೂರು,ಮಾರ್ಚ್,19,2021(www.justkannada.in) : ಎಂಟು ರಾಬರಿ, 4 ಎಕ್ಸ್ ಟಾರ್ಷನ್, ಕಳ್ಳತನ ಸೇರಿ 13 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಖದೀಮರನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.jkಆರೋಪಿಗಳಾದ ಜಮೀಲ್ ಖಾನ್(28), ಶಂಕರ್(42) ಬಂಧನ

ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಎಕ್ಸ್ ಟಾರ್ಷನ್ ಮತ್ತು ಬೆದರಿಕೆಗೆ ಸಂಬಂಧಿಸಿದಂತೆ ದಾಖಲಾದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳು ಮತ್ತು ಬಾತ್ಮೀದಾರರ ಮಾಹಿತಿ ಮೇರೆಗೆ ಆರೋಪಿಗಳಾದ ರಾಜೇಂದ್ರನಗರದ ಜಮೀಲ್ ಖಾನ್(28), ಶಂಕರ್(42) ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ತಲಾ 1ರಂತೆ 12 ರಾಬರಿ, ಎಕ್ಸ್ ಟಾರ್ಷನ್ ದೂರು ದಾಖಲು 

ತನಿಖೆ ವೇಳೆ ಆರೋಪಿ ಜಮೀರ್ ಖಾನ್ ಮೊಹಮ್ಮದ್ ಜಮೀರ್ ಜೊತೆಗೆ ಸೇರಿ 2017ರಿಂದ ಇಲ್ಲಿಯವರೆಗೆ ಇದೇ ತರಹದ ಸಾಕಷ್ಟು ಪ್ರಕರಣಗಳನ್ನು ಮಾಡಿರುವುದಾಗಿ ತಿಳಿಸಿದ್ದು, ಇವರಿಬ್ಬರುಗಳ ವಿರುದ್ಧ ಮೈಸೂರು ನಗರದ ಕುವೆಂಪು ನಗರ, ವಿವಿ ಪುರಂ, ಜಯಲಕ್ಷ್ಮೀಪುರಂ, ಸರಸ್ವತಿಪುರಂ, ನರಸಿಂಹರಾಜ ಪೊಲೀಸ್ ಠಾಣೆಗಳಲ್ಲಿ ಮತ್ತು ಇಲವಾಲ ಪೊಲೀಸ್ ಠಾಣೆ, ಮದ್ದೂರು ಪೊಲೀಸ್ ಠಾಣೆ, ಶ್ರೀರಂಗಪಟ್ಟಣ ಗ್ರಾಮಾಂತರ ಹಾಗೂ ಟೌನ್ ಠಾಣೆಗಳಲ್ಲಿ ಬೆಂಗಳೂರಿನ ಚಾಮರಾಜ ಪೇಟೆ ಮತ್ತು ಕುಂಬಳಗೋಡು ಪೊಲೀಸ್ ಠಾಣೆಗಳಲ್ಲಿ ಮತ್ತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ 1ರಂತೆ 12 ರಾಬರಿ, ಎಕ್ಸ್ ಟಾರ್ಷನ್ ಮತ್ತು ಒಂದು ಬೈಕ್ ಕಳ್ಳತನದ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

arrest-two notorious-cadres-20 thousand-cash-1 bike-2 mobile-money 

ಜಮೀಲ್ ಖಾನ್ ಶಂಕರ್ ಜೊತೆಗೆ ಕೃತ್ಯ ನಡೆಸಿ, ಸಿಕ್ಕಿ ಬಿದ್ದಿದ್ದು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಎಕ್ಸ್ ಟಾರ್ಷನ್ ಮತ್ತು ಬೆದರಿಕೆ ಪ್ರಕರಣ ದಾಖಲಾಗಿದೆ. ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿಗಳಾದ ಡಾ.ಎ.ಎನ್.ಪ್ರಕಾಶ್ ಗೌಡ, ಗೀತ ಪ್ರಸನ್ನ, ನರಸಿಂಹರಾಜ ವಿಭಾಗದ ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್ ಪೆಕ್ಟರ್ ಎ.ಮಲ್ಲೇಶ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿ ನಿಭಾಯಿಸಿದ್ದಾರೆ.

key words : arrest-two notorious-cadres-20 thousand-cash-1 bike-2 mobile-money