ಪರಿಸರ ಸ್ನೇಹಿ ಸಂಚಾರ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ: ಸೈಕಲ್ ಜಾಥಾಗೆ ಚಾಲನೆ….

ಬೆಂಗಳೂರು,ಅಕ್ಟೋಬರ್,2,2020(www.justkannada.in)  ಗಾಂಧಿ ಜಯಂತಿ ಸ್ಮರಣೆಯ ಅಂಗವಾಗಿ ಪಾಲಿಕೆ ಸಹಯೋಗದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಯೋಜಿಸಿದ್ದ ವಿಧಾನಸೌಧದಿಂದ ಮಹಾತ್ಮಗಾಂಧಿ ರಸ್ತೆ ಕಬ್ಬನ್ ಪಾರ್ಕ್ ವರೆಗಿನ ಶಾಂತಿಗಾಗಿ ಸೈಕಲ್ ಜಾಥಾಕ್ಕೆ ಇಂದು ಚಾಲನೆ ನೀಡಲಾಯಿತು.Awareness - traffic –safety-Cycle Jatha -Bangalore.BBMP

ಪರಿಸರ ಸ್ನೇಹಿ ಸಂಚಾರ ಮತ್ತು ಸುರಕ್ಷತೆಗಾಗಿ ಸೈಕಲ್ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸೈಕಲ್ ಜಾಥಾ ನಡೆಯಿತು. ಪಾಲಿಕೆ, ಬೆಂಗಳೂರು ಸ್ಮಾರ್ಟ್ ಸಿಟಿ ಮತ್ತು ಡಲ್ಟ್ ಸಹಯೋಗದಲ್ಲಿ ಮುಂಬರುವ ನವೆಂಬರ್ 1, 2020 ರ ವೇಳೆಗೆ 5 ಕಿಮಿ ಸೈಕಲ್ ಪಥ ನಿರ್ಮಾಣವಾಗಲಿದೆ. ಈ ವರ್ಷಾಂತ್ಯಕ್ಕೆ ಸೈಕಲ್ ಪಥವನ್ನು 25ಕಿಮಿ ವರೆಗೆ ವಿಸ್ತರಿಸುವ ಯೋಜನೆಯಿದೆ.

ಸೈಕಲ್ ಬಳಕೆಯ ಮೂಲಕ ಕಸಮುಕ್ತ ರಸ್ತೆ, ಸಾರ್ವಜನಿಕ ಸ್ಥಳಗಳ ಸ್ವಚ್ಚತೆ, ಶಾಂತಿ-ಸೌಹಾರ್ಧ ಜಾಗೃತಿ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದು ಸೈಕಲ್ ಜಾಥಾ ಉದ್ದೇಶವಾಗಿದೆ.

ಈ ವೇಳೆ ವಿಶೇಷ ಆಯುಕ್ತರುಗಳಾದ ಜೆ.ಮಂಜುನಾಥ್, ರಂದೀಪ್ ಡಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ, ಹಿರಿಯ ಐಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಕಠಾರಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು.

summary…

On Gandhi Jayanthi, Bengaluru has taken a commendable step to promote sustainable cities with the promotion of India Cycles for Change campaign.

A 5 km cycling track is being readied by Bengaluru Smart City along with BBMP & DULT by Nov 1. This will be expanded to 25 km by 2020-end.

The cycle ride today emphasised on non-violence, garbage-free roads, keeping public spaces clean, creating a more liveable Namma Bengaluru & promoting non-motorized transport.

Key words: Awareness – traffic –safety-Cycle Jatha -Bangalore.BBMP