ಅಯೋಧ್ಯೆ ತೀರ್ಪು: ಕೋರ್ಟ್ ಹಾಲ್‌ಗೆ ಐವರು ನ್ಯಾಯಾಧೀಶರ ಆಗಮನ

kannada t-shirts

ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಲಿದೆ.

ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇನ್ನು ನ್ಯಾಯಾಲಯದ ಹಾಲ್‌ಗೆ ಐವರು ನ್ಯಾಯಾಧೀಶರು ಕೂಡ ಆಗಮಿಸಿದ್ದಾರೆ.

website developers in mysore