ಬಿ.ಸತ್ಯನಾರಾಯಣ ಅವರ ನಿವಾಸಕ್ಕೆ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಸಿಎಂ ಅಶ್ವಥ್ ನಾರಾಯಣ್…

ತುಮಕೂರು,ಆ,12,2020(www.justkannada.in):  ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಹಾಗೂ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.b-satyanarayana-dcm-ashwath-narayan-condoled-family-tumkur

ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು , ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಮತ್ತು ಪುತ್ರ ಸತ್ಯಪ್ರಕಾಶ್ ಅವರಿಗೆ ಸಾಂತ್ವನ ಹೇಳಿದರಲ್ಲದೆ, ಸತ್ಯನಾರಾಯಣ ಅವರ ಜತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡರು.b-satyanarayana-dcm-ashwath-narayan-condoled-family-tumkur

ಬಳಿಕ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಸತ್ಯನಾರಾಯಣ ಅವರು ಅತ್ಯಂತ ಸಜ್ಜನ ರಾಜಕಾರಣಿಯಾಗಿದ್ದರು. ಸರಳಜೀವಿ, ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಅವರೊಬ್ಬ ವಿರಳ ರಾಜಕಾರಣಿ ಎಂದು ನುಡಿದರು. ಈ ಸಂದರ್ಭದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಶಾಸಕರಾದ ಜ್ಯೋತಿ ಗಣೇಶ್ ಅವರು ಡಿಸಿಎಂ ಜತೆಯಲ್ಲಿದ್ದರು.

Key words: B. Satyanarayana – DCM- Ashwath Narayan- condoled – family- tumkur