ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ತೀರ್ಪಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ….

ನವದೆಹಲಿ,ಸೆಪ್ಟಂಬರ್,30,2020(www.justkannada.in):  ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ 32 ಆರೋಪಿಗಳನ್ನ ಖುಲಾಸೆಗೊಳಿಸಿ  ಇಂದು ಲಖನೌ ವಿಶೇಷ ಕೋರ್ಟ್  ಮಹತ್ವದ ತೀರ್ಪು ನೀಡಿದೆ.jk-logo-justkannada-logo

ಕೋರ್ಟ್ ನ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ,  ಕೋರ್ಟ್ ತೀರ್ಪು ನಮ್ಮೆಲ್ಲರಿಗೂ ಖುಷಿ ತಂದಿದೆ. ಇದು ನಮ್ಮೆಲ್ಲರ ಪಾಲಿನ ಮಹತ್ವದ ದಿನ. ಹಲವು ಸಮಯದ ಬಳಿಕ ಸಿಹಿಸುದ್ದಿ ಸಿಕ್ಕಿದೆ ಎಂದು ನುಡಿದಿದ್ದಾರೆ.babri-masjid-wreck-case-bjp-leader-lk-advani-murali-manohar-joshi-happy-verdict

ಹಾಗೆಯೇ ಬಿಜೆಪಿ ಮುಖಂಡ ಮುರಳಿ ಮನೋಹರ್ ಜೋಷಿ ಮಾತನಾಡಿ, ನ್ಯಾಯಾಲಯದ ತೀರ್ಪು ಸ್ವಾಗತಾರ್ಹ. ಕೋರ್ಟ್  ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಖುಷಿ  ತಂದಿದೆ.  ದೇಶದ  ನ್ಯಾಯ ವ್ಯವಸ್ಥೆಯ ಮೇಲೆ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Key words: Babri Masjid- wreck case-bjp leader- LK Advani – Murali Manohar Joshi – happy-verdict.