ವಂಚಕ ಯುವರಾಜ್ ಆಸ್ತಿ ಜಪ್ತಿಗೆ ಕೋರ್ಟ್ ಮಧ್ಯಂತರ ಆದೇಶ…

 ಬೆಂಗಳೂರು,ಜನವರಿ,22,2021(www.justkannada.in):  ಹಲವರಿಗೆ ವಂಚನೆ ಹಾಗೂ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸಿಬಿಯಿಂದ  ಬಂಧನಕ್ಕೊಳಗಾಗಿರುವ ವಂಚಕ ಯುವರಾಜ್ ಆಸ್ತಿ ಜಪ್ತಿಗೆ  ಕೋರ್ಟ್ ಆದೇಶ ನೀಡಿದೆ.jk

ವಂಚಕ ಯುವರಾಜ್ ನ 80 ರಿಂದ 90 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಬೆಂಗಳೂರಿನ 67ನೇ ಸಿಸಿಹೆಚ್ ನ್ಯಾಯಾಲಯ ಆದೇಶ ನೀಡಿದೆ.

ಆಸ್ತಿ ಜಪ್ತಿಗೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆ ಇಂದು ಪ್ರಕರಣ ಕುರಿತು ವಿಚಾರಣೆ ನಡೆಸಿದ ಬೆಂಗಳೂರಿನ 67ನೇ ಸಿಸಿಹೆಚ್ ಕೋರ್ಟ್, ಯುವರಾಜ್ ನ 80 ರಿಂದ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ.

ಈ ಸಂಬಂಧ ವಂಚಕ ಯುವರಾಜ್ ಗೂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದರಿಂದಾಗಿ ಯುವರಾಜ್ ಹೆಂಡತಿಯ ಹೆಸರಿನಲ್ಲಿರುವ ಒಟ್ಟು 26 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ. ವಂಚಕ ಯುವರಾಜ್ ಗೆ ಸೇರಿದ ನಿವೇಶನ ಜಮೀನು ವಶಕ್ಕೆ ಪಡೆಯುವಂತೆ ಕೋರ್ಟ್ ಆದೇಶಿಸಿದೆ.bangalore-court-order-yuvrajs-property-siege

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಹಾಸನ, ಮದ್ದೂರು, ದ್ವಾರ ಕೊತ್ತನಹಳ್ಳಿಯಲ್ಲಿ ನಿವೇಶನ, ಮನೆಗಳು, ಜಮೀನು ಸೇರಿ ಒಟ್ಟು 26 ಆಸ್ತಿ ಮುಟ್ಟುಗೋಲಿಗೆ ಆದೇಶ ಹೊರಡಿಸಲಾಗಿದೆ. ಯುವರಾಜ್​ ಜೊತೆ ಆತನ ಪತ್ನಿ ಆಸ್ತಿ ಕೂಡ ಜಪ್ತಿ ಆಗಲಿದೆ.

Key words: Bangalore-Court-order – Yuvraj’s- property- Siege