ಬೆಂಗಳೂರಿನಲ್ಲಿ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ: ನಿಷೇಧಾಜ್ಞೆ ಜಾರಿ….

ಬೆಂಗಳೂರು,ನ,30,2019(www.justkannada.in):  ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆ ಡಿಸೆಂಬರ್ 3 ರಿಂದ ಡಿಸೆಂಬರ್ 6ರವರೆಗೆ ನಿಷೇಧಾಜ್ಞೆ ವಿಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ನಡುವೆ ಬೆಂಗಳೂರಿನಲ್ಲಿ ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ಕೆ.ಆರ್ ಪುರಂ ಮತ್ತು ಯಶವಂತ ಪುರದಲ್ಲಿ ಉಪಚುನಾವಣೆ ನಡೆಯಲಿದೆ.

ಈ ಹಿನ್ನೆಲೆ ಡಿಸೆಂಬರ 3ರ ಸಂಜೆ 6 ಗಂಟೆಯಿಂದ ಡಿಸೆಂಬರ್ 6ರ ಸಂಜೆ 6 ಗಂಟೆವರೆಗೆ ನಾಲ್ಕು ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ. ರಾಜಕೀಯ ಪಕ್ಷಗಳು ಧಾರ್ಮಿಕ ಪಂಗಡಗಳು ಮೆರವಣಿಗೆ ಮಾಡದಂತೆ ನಿಷೇಧಿಸಲಾಗಿದೆ.

Key words: Bangalore- four constituencies –by election-.Prohibition