“ಬೆಂಗಳೂರು ಪ್ರತಿಷ್ಠೆಗೆ ಧಕ್ಕೆಯಾಗದಂತೆ ನೋಡಿಕೊಳ್ಳೋಣ” : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

kannada t-shirts

ಬೆಂಗಳೂರು,ಮಾರ್ಚ್,20,2021(www.justkannada.in) :  ಕೇಂದ್ರದ ನಗರಾಭಿವೃದ್ದಿ ಇಲಾಖೆ ಪ್ರಕಟಿಸಿರುವ ʼಸುಲಲಿತ ಜೀವನ ನಿರ್ವಹಣೆ ಸೂಚ್ಯಂಕʼದಲ್ಲಿ ಅಗ್ರಸ್ಥಾನ ಪಡೆದಿರುವ ಬೆಂಗಳೂರು ನಗರದ ಪ್ರತಿಷ್ಠೆಗೆ ಧಕ್ಕೆ ಆಗದಂತೆ ಹಾಗೂ ವ್ಯವಸ್ಥಿತವಾಗಿ ಬೆಳೆಯುವಂತೆ  ನೋಡಿಕೊಳ್ಳಬೇಕಾದ ಅಗತ್ಯ ಇವತ್ತು ಇನ್ನಷ್ಟು ಹೆಚ್ಚಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.jkಬೆಂಗಳೂರಿನಲ್ಲಿ ಶನಿವಾರ ಇನ್ಸಿಟ್ಯೂಟ್‌ ಆಫ್‌ ಅರ್ಬನ್‌ ಡಿಸೈನರ್ಸ್‌ ಸಂಸ್ಥೆ ಆಯೋಜಿಸಿದ್ದ ʼಸಿಟಿ ಫ್ಯೂಚರ್ಸ್‌ʼ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿ, “ಬೆಂಗಳೂರು ಜಾಗತಿಕ ಮಟ್ಟದಲ್ಲಿ ವೇಗವಾಗಿ ಮತ್ತು ವ್ಯವಸ್ಥಿತವಾಗಿ ಬೆಳೆಯುತ್ತಿರುವ ನಗರ. ಹೀಗಾಗಿ ಬೆಂಗಳೂರಿನ ಬಗ್ಗೆ ಪ್ರತಿಯೊಬ್ಬರೂ ಆಸಕ್ತಿಯಿಂದ ವೈಜ್ಞಾನಿಕವಾಗಿ ಕೆಲಸ ಮಾಡಬೇಕು” ಎಂದರು.

ವಿನ್ಯಾಸಕ್ಕೆ ಮಹತ್ವ ನೀಡಲು ಸಲಹೆ

ನಗರವೆಂದಾಕ್ಷಣ ಅಥವಾ ಕಟ್ಟಡ ಎಂದಾಕ್ಷಣ ಯಾವುದೇ ಪೂರ್ವಸಿದ್ಧತೆ ಇಲ್ಲ ಎಂದರೆ ನಿರುಪಯುಕ್ತ. ಈ ಆಧುನಿಕ ಕಾಲದಲ್ಲಿ ಸರಕಾರ ಇರಲಿ ಅಥವಾ ಖಾಸಗಿ ಕ್ಷೇತ್ರ ಇರಲಿ, ಎಲ್ಲೇ ಆದರೂ ವಿನ್ಯಾಸಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಸರಕಾರಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಯೋಜಿತವಾದ ವಿನ್ಯಾಸ, ಪರಿಕಲ್ಪನೆ ಅತ್ಯಂತ ಅಗತ್ಯ ಎಂದು ಹೇಳಿದರು.

ಮಲ್ಲೇಶ್ವರ ಕ್ಷೇತ್ರದಲ್ಲಿ ಕೈಗೊಂಡಿರುವ ಯಾವುದೇ ನಿರ್ಮಾಣ ಕಾಮಗಾರಿ ಇದ್ದರೂ ಆದಕ್ಕೆ ನಿರ್ದಿಷ್ಟ ವಿನ್ಯಾಸವನ್ನು ರೂಪಿಸುವ ಪರಿಪಾಠವಿದೆ. ಗುಣಮಟ್ಟದ ಜತೆಗೆ, ನೋಡುಗರಿಗೆ ಚೆನ್ನಾಗಿಯೂ ಕಾಣಬೇಕು. ಈ ನಿಟ್ಟಿನಲ್ಲಿ ವಿನ್ಯಾಸಕ್ಕೆ ಉತ್ತೇಜನ ನೀಡಬೇಕಾಗಿದೆ ಎಂದರು. Bangalore-prestige-not-affected-DCM-Dr.C.N.Ashwaththanarayanaದೊಮ್ಮಲೂರಿನ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರ (ಬಿಐಸಿ)ದಲ್ಲಿ ಈ ಪ್ರದರ್ಶನವು ಭಾನುವಾರವೂ ಇರಲಿದೆ. ಇನ್ಸಿಟ್ಯೂಟ್‌ ಆಫ್‌ ಅರ್ಬನ್‌ ಡಿಸೈನರ್ಸ್‌ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

key words : Bangalore-prestige-not-affected-DCM-Dr.C.N.Ashwaththanarayana

website developers in mysore