ಮಾಂಸ ಕೊಳ್ಳಲು ಬಂದಾತ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಇರಿದ : ಓರ್ವ ಸಾವು…

ಬೆಂಗಳೂರು,ಅಕ್ಟೋಬರ್,18,2020(www.justkannada.in):  ಮಾಂಸ ಕೊಳ್ಳಲು ಬಂದಿದ್ದ ವ್ಯಕ್ತಿಯೋರ್ವ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.jk-logo-justkannada-logo

ನಗರದ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ‘ಪಿಳ್ಳಪ್ಪ ಗಾರ್ಡನ್ ನಿವಾಸಿ ಗಣೇಶ್ ಎಂಬಾತನೇ ಚಾಕುವಿನಿಂದ ಇರಿದ ವ್ಯಕ್ತಿ.  ಆರೋಪಿ ಚಾಕು ಇರಿತದಿಂದ ತೀವ್ರ ಗಾಯಗೊಂಡಿದ್ದ ಮಾರಿ ಎಂಬುವರು  ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿ ಗಣೇಶ್ ನನ್ನ ಬಂಧಿಸಿ ಚಾಕನ್ನ ವಶಕ್ಕೆ ಪಡೆದಿದ್ದಾರೆ. ಕೂಲಿ ಕಾರ್ಮಿಕನಾಗಿರುವ ಗಣೇಶ್ ಇಂದು  ಮಾಂಸ ಖರೀದಿಸಲು  ಮಾಟನ್ ಸ್ಟಾಲ್ ಗೆ ಬಂದಿದ್ದ.ಲ ಈ ವೇಳೆ ಮಟನ್ ರೇಟ್ ಜಾಸ್ತಿ ಇದೆ ಎಂದು ಗಲಾಟೆ ಮಾಡಿ ನಂತರ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

Key words: Bangalore- stabbed – knife –  death-arrest