ನಾಳೆ ರೈತರಿಂದ ಬಾರುಕೋಲು ಚಳುವಳಿ: ವಿಧಾನಸೌಧ ಮುತ್ತಿಗೆಗೆ ನಿರ್ಧಾರ…

ಬೆಂಗಳೂರು,ಡಿಸೆಂಬರ್,8,2020(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು  ಕರೆ ನೀಡಲಾಗಿದ್ದ ಭಾರತ ಬಂದ್ ಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಮಧ್ಯೆ ನಾಳೆಯೂ ರೈತರ ಪ್ರತಿಭಟನೆ ಮುಂದುವರೆಯಲಿದೆ. logo-justkannada-mysore

ನಾಳೆ ರೈತರಿಂದ ಬಾರುಕೋಲು ಚಳುವಳಿ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ರೈತಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಾಳೆಯಿಂದ ನಮ್ಮ ಹೋರಾಟ ತೀವ್ರಸ್ವರೂಪ ಪಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ.  ಈ ಮುತ್ತಿಗೆ ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಈ ಮೂಲಕ ರೈತ ವಿರೋಧಿ ಮಸೂದೆಗಳ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. barukolu Movement -Farmers – Tomorrow-bangalore-Decision -Vidhan soudha

ಹಾಗೆಯೇ ನಾಳೆ ಬೆಂಗಳೂರಿನಲ್ಲಿ ರೈತರು ಬಾರುಕೋಲು ಚಳುವಳಿ ಆಯೋಜನೆ ಮಾಡಲಾಗಿದ್ದು ಸುಮಾರು 10 ಸಾವಿರ ರೈತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

Key words:  barukolu Movement -Farmers – Tomorrow-bangalore-Decision -Vidhan soudha