ಬಿಸಿಸಿಐ ಚುನಾವಣೆ ಮುಂದೂಡಿಕೆ: ವಿನೋದ್ ರಾಯ್

kannada t-shirts

ಬೆಂಗಳೂರು, ಸೆಪ್ಟೆಂಬರ್ 25, 2019 (www.justkannada.in): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಚುನಾವಣೆಯನ್ನು ಅಕ್ಟೋಬರ್ 22 ರ ಬದಲು 23ಕ್ಕೆ ಮುಂದೂಡಲಾಗಿದೆ.

ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಕಾರಣ ಚುನಾವಣೆಯನ್ನು ಮುಂದೂಡಲಾಗಿದೆ.

ಬಿಸಿಸಿಐಗೆ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಕ್ರಿಕೆಟ್ ಆಡಳಿತ ಸಮಿತಿ (ಸಿಒಎ) ಮುಖಸ್ಥ ವಿನೋದ್ ರಾಯ್ ಅವರು ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಸಿಸಿಐ ಚುನಾವಣೆಯಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳು ಇಲ್ಲ. ರಾಜ್ಯ ಚುನಾವಣೆಗಳ ಕಾರಣಕ್ಕೆ ಒಂದು ದಿನ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

website developers in mysore