ಮಹಾಮಳೆಯಿಂದ ಮತ್ತೊಂದು ದುರಂತ: ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಪಿಎಸ್ ಐ ಸಾವು…

ಬೆಳಗಾವಿ,ಆ,6,2019(www.justkannada.in):  ರಾಜ್ಯದ ಹಲವೆಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ತತ್ತರಿಸಿದ್ದು   ಮಹಾಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸಂಚಾರ ಸುಗಮ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಪಿಎಸ್ ಐ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿ ಬಳಿ ಈ ಘಟನೆ ನಡೆದಿದೆ. ಕಿತ್ತೂರು ಪೊಲೀಸ್ ಠಾಣೆ ಪಿಎಸ್ ಐ ಈರಣ್ಣ ಲಟ್ಟಿಗೆ ಮೃತಪಟ್ಟವರು. ಮಳೆಯಿಂದಾಗಿ ರಸ್ತೆಯಲ್ಲಿ  ಭಾರಿ ನೀರಿನಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ವೇಳೆ  ಸುಗುಮ ಸಂಚಾರ ವ್ಯವಸ್ಥೆ ಮಾಡುತ್ತಿದ್ದ ವೇಳೆ ಕಾರು ಪಿಎಸ್ ಐ ಈರಣ್ಣ ಲಟ್ಟಿಗೆ ಅವರಿಗೆ ಗುದ್ದಿದೆ ಎನ್ನಲಾಗಿದೆ.

ಈ ವೇಳೆ ಈರಣ್ಣ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿ ಮಹಾಮಳೆಗೆ ಮತ್ತೊಂದು ದುರಂತ ಸಂಭವಿಸಿದೆ.

Key words: belagavi- rain-PSI- death -car -collision