ರಾಜ್ಯದಲ್ಲಿ 21 ದಿನ ಭಾರತ್ ಜೋಡೋ ಪಾದಯಾತ್ರೆ: ಎಲ್ಲರೂ ಭಾಗವಹಿಸಬಹುದು- ಡಿ.ಕೆ ಶಿವಕುಮಾರ್.

kannada t-shirts

ಬೆಂಗಳೂರು,ಸೆಪ್ಟಂಬರ್,9,2022(www.justkannada.in): ಭಾರತ್ ಜೋಡೋ ಪಾದಯಾತ್ರೆ ಆರಂಭವಾಗಿದ್ದು ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸಿದ್ದಾರೆ ಮೊದಲ ದಿನ 16 ಕಿ.ಮೀ ನಡೆದಿದ್ದಾರೆ. ಕರ್ನಾಟಕದಲ್ಲಿ 21 ದಿನ ಪಾದಯಾತ್ರೆ ನಡೆಯಲಿದ್ದು,  ದಸರಾ ವೇಳೇ 2 ದಿನ ರಜೆ ಇರಲಿದೆ ಎಂದರು.

ಪಾದಯಾತ್ರೆಗಯಲ್ಲಿ ಎಲ್ಲರೂ ಭಾಗವಹಿಸಬಹುದು. ಭಾಗವಹಿಸುವವರು ರಿಜಿಸ್ಟರ್ ಮಾಡಿಕೊಳ್ಳಬೇಕು ಇಂದಿನಿಂದ ರಿಜಿಸ್ಟ್ರೇಷನ್ ಆರಂಭವಾಗಿದ್ದು, ಹೀಗಾಗಿ ವೆಬ್ ಸೈಟ್ ಲಾಂಚ್ ಮಾಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words:  Bharat Jodo Padayatra – Everyone – participate-DK Shivakumar.

website developers in mysore