ತಲಪಾಡಿಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ: ಸಂಜೆ 6 ಗಂಟೆವರೆಗೆ ಟೋಲ್ ಸಂಗ್ರಹ ಸ್ಥಗಿತ…

ದಕ್ಷಿಣ ಕನ್ನಡ,ಜ,1,2020(www.justkannada.in):  ಕೇರಳದ ಗಡಿಭಾಗ ತಲಪಾಡಿ ಬಳಿ ಟೋಲ್ ಸಂಗ್ರಹಿಸುವುದಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಟೋಲ್ ಸಂಗ್ರಹವನ್ನ ಸಂಜೆ 6 ಗಂಟೆವರೆಗೆ ಸ್ಥಗಿತಗೊಳಿಸಲಾಗಿದೆ.

ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ಪೂರ್ಣಗೊಳಿಸದ ಹಿನ್ನಲೆಯಲ್ಲಿ ಟೋಲ್ ಸಂಗ್ರಹಿಸದಂತೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೂ ಕೂಡ ಕೇರಳದ ಗಡಿಭಾಗ ತಲಪಾಡಿ ಟೋಲ್ ಬಳಿ ಟೋಲ್ ಸಂಗ್ರಹಿಸಲಾಗುತ್ತಿತ್ತು.

ಇದಕ್ಕೆ ವಿರೋಧ ವ್ಯಕ್ತಪಡಿಸಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಬಳಿ ಪ್ರತಿಭಟನೆ  ನಡೆಯಿತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಕಾರ್ಯಕರ್ತರು ಹಾಗು ಶಾಸಕರು ಟೋಲ್ ಸಂಗ್ರಹವನ್ನು ವಿರೋಧಿಸಿ ಟೋಲ್ ಬಳಿ ಕುಳಿತು ಧರಣಿ ನಡೆಸಿದರು. ಹೀಗಾಗಿ ಸಂಜೆ 6 ಗಂಟೆವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲಾಗಿದೆ.

Key words: BJP activists -protest -against -toll collection-dakshina kannada- talapadi