ಬಿಜೆಪಿ ಪರ ನಟ ಸುದೀಪ್ ಪ್ರಚಾರ ವಿಚಾರ: ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು.

ಬೆಂಗಳೂರು,ಏಪ್ರಿಲ್,7,2023(www.justkannada.in): ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ   ಚುನಾವಣಾ ಆಯೋಗಕ್ಕೆ ಜೆಡಿಎಸ್  ದೂರು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕ.  ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು ಹೀಗಾಗಿ ಚುನಾವಣೆ ಮುಗಿಯುವವರೆಗೆ ಚಿತ್ರ ಪ್ರದರ್ಶಿಸಬಾರದು.  ಸುದೀಪ್ ಅವರ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಜೆಡಿಎಸ್ ಕಾನೂನು ವಿಭಾಗದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

Key words: BJP- actor- Sudeep -campaign -JDS -complaint – Election Commission.