ಇಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು, ಸೆಪ್ಟೆಂಬರ್ 18, 2021 (www.justkannada.in): ಇಂದು ದಾವಣಗೆರೆಯಲ್ಲಿ
ಪೂರ್ಣ ಪ್ರಮಾಣದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
1 ವರ್ಷದ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಇಂದು ಬೆಳಗ್ಗೆ
ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಭೆ
ನಡೆಯಲಿದೆ.
ರಾಜ್ಯದ ಪದಾಧಿಕಾರಿಗಳು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ
ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ
ಕಾರ್ಯದರ್ಶಿಗಳು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.