17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ- ಶಾಸಕ ಎಂ.ಪಿ ರೇಣುಕಾಚಾರ್ಯ…

ದಾವಣಗೆರೆ,ಸೆ,7,2019(www.justkannada.in0:  17 ಅನರ್ಹ ಶಾಸಕರ ತ್ಯಾಗ ಬಲಿದಾನಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

 ಹೊನ್ನಾಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಈ ಹಿಂದೆ ದೇಶಕ್ಕೆ ಸ್ವಾತಂತ್ರ್ಯ  ಬಂದ ರೀತಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. 17 ಮಂದಿ   ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ನಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ  ಎಂದು ವಿವಾದಾತ್ಮಕ ಹೇಳಿಕೆ  ನೀಡಿದ್ದಾರೆ.

ಈ ಮೂಲಕ ಶಾಸಕ ರೇಣುಕಾಚಾರ್ಯ  17 ಶಾಸಕರನ್ನ ಸ್ವಾತಂತ್ರ ಹೋರಾಟಕ್ಕೆ ಹೋಲಿಸಿದ್ದಾರೆ.

Key words:  BJP government – power – 17 disqualified MLAs-Sacrifice – MP Renukacharya.