ಬಿಎಸ್ ವೈ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ ಎಂದಿದ್ದೆ: ಅದೀಗ ಆಗಿದೆ- ಶ್ರೀ ದಿಂಗಾಲೇಶ್ವರ ಸ್ವಾಮೀಜಿ.

kannada t-shirts

ಹುಬ್ಬಳ್ಳಿ,ಮೇ,15,2023(www.justkannada.in):  ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತದೆ. ಅಂತ ನಾನು ಈ ಹಿಂದೆ ಹೇಳಿದ್ದೆ. ಅದು ಈಗ ಆಗಿದೆ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ,  ಬಿಎಸ್ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು, ಹಿರಿಯ ನಾಯಕರನ್ನ ಕಡೆಗಣಿಸಿದ್ದು ಬಿಜೆಪಿಯ ಈ ಸ್ಥಿತಿಗೆ ಕಾರಣ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್​​ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್​ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು. ಯಾವದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಸ್ಥಿತಿಗೆ ಕಾರಣ  ಹೇಳಿದರು.

ಬಿ.ಎಸ್​ ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್​ ಶೆಟ್ಟರ್, ಕೆ.ಎಸ್​ ಈಶ್ವರಪ್ಪ ಕಡೆಗಣಿಸಿದ್ದೇ ಇದಕ್ಕೆಲ್ಲ ‌ಕಾರಣ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಬೇಕು ಅಂದ್ರೆ ಏನು..? ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಾಗ ಹೇಗೆ ನಡೆಕೊಂಡರು ಅಂತ ರಾಜ್ಯಕ್ಕೆ ಗೊತ್ತಿದೆ ಎಂದು ಬಿಜೆಪಿಗೆ ಟಾಂಗ್ ನೀಡಿದರು.

Key words: BJP -government – washed – BSY- tears -Sri Dingaleshwara Swamiji

website developers in mysore